‘ಚತುರ್ಭುಜ, ಪದ್ಮಪೀಠಾಸೀನ, ಪಾಶಾಂಕುಶ, ಅಭಯ ವರದ ಮುದ್ರೆಯೊಂದಿಗೆ ಕನ್ನಡ ಧ್ವಜ ಹಿಡಿದಿರುವ ಭುವನೇಶ್ವರಿ ಪ್ರತಿಮೆ ನಿರ್ಮಿಸುವಂತೆ ತಿಳಿಸಲಾಗಿತ್ತು. ಅದೇ ಪ್ರಕಾರ ನಿರ್ಮಿಸಲಾಗಿದೆ. ಇದಕ್ಕೆ ₹ 4 ಲಕ್ಷ ವೆಚ್ಚವಾಗಿದೆ.ಭುವನೇಶ್ವರಿ ಪ್ರತಿಮೆ ಅನಾವರಣಕ್ಕೆ ರಾಜ್ಯಪಾಲರನ್ನು ಆಹ್ವಾನಿಸುವ ಯೋಚನೆಯಿದೆ. ಕನ್ನಡ ಪರ ಹೋರಾಟಗಾರರಿಗೂ ಆಹ್ವಾನ ನೀಡಲಾಗುವುದು’ ಎಂದು ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ತಿಳಿಸಿದರು.