ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಸಾಪ: ಅಧಿಕಾರ ಅವಧಿ ಕುರಿತ ಅರ್ಜಿ ವಾಪಸ್

Last Updated 8 ಸೆಪ್ಟೆಂಬರ್ 2020, 18:51 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಕಾರ್ಯಕಾರಿ ಸಮಿತಿ ಅಧಿಕಾರದ ಅವಧಿ ವಿಸ್ತರಣೆ‌ ನಿರ್ಣಯ ವಿರೋಧಿಸಿ ಹೈಕೋರ್ಟ್‌ಗೆ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಅರ್ಜಿದಾರರು ಹಿಂಪಡೆದಿದ್ದು, ಅಧ್ಯಕ್ಷರ ಚುನಾವಣೆಗೆ ಇದ್ದ ತೊಡಕು ನಿವಾರಣೆಯಾದಂತಾಗಿದೆ.

ಹಾಲಿ ಕಾರ್ಯಕಾರಿ ಸಮಿತಿ ಬೈಲಾಗೆ ತಿದ್ದುಪಡಿ ತಂದು ಅಧಿಕಾರವಧಿಯನ್ನು 3 ರಿಂದ 5 ವರ್ಷಗಳಿಗೆ ವಿಸ್ತರಿಸಿಕೊಂಡಿತ್ತು. ಇದನ್ನು ಪ್ರಶ್ನಿಸಿ
ಕನ್ನಡ ಸಂಘರ್ಷ ಸಮಿತಿ ಅಧ್ಯಕ್ಷ ಕೋ.ವೆಂ. ರಾಮಕೃಷ್ಣೇಗೌಡ ಅವರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ತಿದ್ದುಪಡಿ ಪ್ರಕಾರ ಅಧ್ಯಕ್ಷರ ಅಧಿಕಾರದ ಅವಧಿ 2021ರ ಮಾರ್ಚ್‌ಗೆ ಅಂತ್ಯವಾಗಲಿದೆ. ಆದರೆ, ಬೈಲಾದ ಪ್ರಕಾರ ಅನಿವಾರ್ಯ ಸ್ಥಿತಿಯಲ್ಲಿ ಕಾರ್ಯಕಾರಿ ಸಮಿತಿಯ ಅವಧಿಯನ್ನು 6 ತಿಂಗಳು ವಿಸ್ತರಿಸಿಕೊಳ್ಳಲು ಸಮಿತಿಗೆ ಅವಕಾಶವಿದೆ.

‘ಅರ್ಜಿಯನ್ನು ಪರಿಷತ್ತಿನ ಹಿತದೃಷ್ಟಿ
ಯಿಂದ ಹಿಂದಕ್ಕೆ ಪಡೆದುಕೊಂಡಿದ್ದೇನೆ. ಈಗ ಚುನಾವಣೆಗೆ ದಾರಿ ಸುಗಮ
ವಾಗಿದೆ. ಕೂಡಲೇ ಚುನಾವಣೆ ಪ್ರಕ್ರಿಯೆ ಪ್ರಾರಂಭಿಸಬೇಕು’ ಎಂದು ಕೋ.ವೆಂ. ರಾಮಕೃಷ್ಣೇಗೌಡ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT