ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಸರಗೋಡು | ಸರೋವರ ಕ್ಷೇತ್ರ ಅನಂತಪುರದ ‘ದೇವರ ಮೊಸಳೆ’ ಬಬಿಯಾ ಇನ್ನಿಲ್ಲ

Last Updated 10 ಅಕ್ಟೋಬರ್ 2022, 4:22 IST
ಅಕ್ಷರ ಗಾತ್ರ

ಮಂಗಳೂರು: ಕಾಸರಗೋಡು ಜಿಲ್ಲೆಯ ಸರೋವರ ಕ್ಷೇತ್ರ ಅನಂತಪುರದ ದೇವರ ಮೊಸಳೆ 'ಬಬಿಯಾ' ಭಾನುವಾರ ರಾತ್ರಿ ಮೃತಪಟ್ಟಿದೆ.

ಈ ದೇವಸ್ಥಾನಕ್ಕೆ ಬರುವ ಭಕ್ತರಿಗೆ ಈ ಮೊಸಳೆ ಪ್ರಮುಖ ಆಕರ್ಷಣೆಯಾಗಿತ್ತು.

ಸರೋವರದ ಮಧ್ಯಭಾಗದಲ್ಲಿ ಈ ದೇವಸ್ಥಾನ ಇದೆ. ಅರ್ಚಕರು ಪೂಜೆಯ ನಂತರ ಈ ಸರೋವರಕ್ಕೆ ಬಂದು 'ಬಬಿಯಾ' ಎಂದು ಕರೆಯುತ್ತಿದ್ದರು. ಆಗ ಅಲ್ಲಿಗೆ ಬರುತ್ತಿದ್ದ ಈ ಮೊಸಳೆ, ಅವರು ಕೊಡುವ ಪ್ರಸಾದ ಸೇವಿಸುತ್ತಿತ್ತು. ಇದು ಭಕ್ತರಿಗೆ ಅಚ್ಚರಿಯನ್ನುಂಟು ಮಾಡುತ್ತಿತ್ತು.

'ಈ ಮೊಸಳೆ ಇಲ್ಲಿಗೆ ಹೇಗೆ ಬಂತು ಎಂಬುದು ಯಾರಿಗೂ ಗೊತ್ತಿಲ್ಲ. ಈ ಮೊದಲು ಇದ್ದ 'ಬಬಿಯಾ' ಎಂಬ ಮೊಸಳೆಯನ್ನು ಬ್ರಿಟಿಷ್‌ ಅಧಿಕಾರಿಗಳು ಹೊಡೆದು ಕೊಂಡಿದ್ದರು. ಇದಾದ ಕೆಲ ದಿನಗಳ ನಂತರ ಮತ್ತೊಂದು ಮೊಸಳೆ ಈ ಸರೋವರದಲ್ಲಿ ಕಾಣಿಸಿಕೊಂಡಿತ್ತು’ ಎಂದು ಈ ದೇವಸ್ಥಾನಕ್ಕೆ ಬರುವ ಹಿರಿಯರು ಹೇಳುವ ಮಾತು.

ಅರ್ಚಕರಿಂದ ಪ್ರಸಾರ ಸ್ವೀಕರಿಸುತ್ತಿರುವ 'ಬಬಿಯಾ'
ಅರ್ಚಕರಿಂದ ಪ್ರಸಾರ ಸ್ವೀಕರಿಸುತ್ತಿರುವ 'ಬಬಿಯಾ'

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT