‘ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಕಾಶಿಯನ್ನು ಅಭಿವೃದ್ಧಿಪಡಿಸಿದ್ದಾರೆ. 23 ಘಾಟ್ಗಳನ್ನು ಸ್ವಚ್ಚಗೊಳಿಸಿ ಬದಲಾವಣೆ ಮಾಡಲಾಗಿದೆ. ದೇವಸ್ಥಾನದ ಆವರಣವನ್ನೂ ಸ್ವಚ್ಛಗೊಳಿಸಿ, ಭಕ್ತಿ– ಭಾವ ಮೂಡುವಂತೆ ಮಾಡಿದ್ದಾರೆ. ರಾಜ್ಯದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಅಲ್ಲಿಗೆ ತೆರಳಲಿ ಎಂಬ ಉದ್ದೇಶದಿಂದ ಆರಂಭಿಸಿದ ಸಹಾಯಧನ ಯೋಜನೆಗೆ ಬಜೆಟ್ನಲ್ಲಿ ಅನುದಾನ ನೀಡಲಾಗಿದೆ. ಯಾತ್ರಾರ್ಥಿಗಳು ಕಾಶಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿನ ಕರ್ನಾಟಕ ಛತ್ರದಲ್ಲಿ ನೋಂದಣಿ ಮಾಡಿಸಿಕೊಂಡು ದಾಖಲಾತಿಗಳನ್ನು ವೆಬ್ ಪೋರ್ಟ್ಲ್ಗೆ ಸಲ್ಲಿಸಿ, ಸಹಾಯಧನ ಪಡೆಯಬಹುದು’ ಎಂದರು.