ಪಟ್ಟಣದ ಕಾಯಕ ಭವನದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಮೇಶ್ವರನಾಯ್ಕ ಬೆಂಗಳೂರಿನಲ್ಲಿ ಬಂಗಲೆ, ವಾಣಿಜ್ಯ ಸಂಕಿರ್ಣ ಹೊಂದಿದ್ದಾರೆ. ಹಡಗಲಿ, ಹರಪನಹಳ್ಳಿ, ಮುಂಡರಗಿ, ದಾವಣಗೆರೆಯಲ್ಲಿ ಅಪಾರ ಪ್ರಮಾಣದ ಆಸ್ತಿಗಳು ಬೇನಾಮಿ ಹೆಸರಲ್ಲಿವೆ. ಹರಪನಹಳ್ಳಿಯಲ್ಲಿ ಕ್ರಷರ್, ಮಿಕ್ಸರ್ ಪ್ಲಾಂಟ್ ಹೊಂದಿದ್ದಾರೆ. ಮಾಹಿತಿ ಹಕ್ಕು ಕಾರ್ಯಕರ್ತರು, ಹರಪನಹಳ್ಳಿಯ ಅವರ ಸಂಬಂಧಿಗಳೇ ಅಕ್ರಮ ಆಸ್ತಿ ವಿವರವನ್ನು ನನಗೆ ಒದಗಿಸಿದ್ದಾರೆ ಎಂದು ತಿಳಿಸಿದರು.