<p><strong>ಬೆಂಗಳೂರು</strong>: ‘ರಾಜ್ಯದ ಎಲ್ಲ ಖಾಸಗಿ ವಿಶ್ವವಿದ್ಯಾಲಯಗಳು ಒಪ್ಪುವುದಾದರೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದಲೇ (ಕೆಇಎ) ರಾಷ್ಟ್ರಮಟ್ಟದಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಸಲು ಸರ್ಕಾರ ಸಿದ್ಧ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.</p>.<p>ಎಂಜಿನಿಯರಿಂಗ್ ಕಾಲೇಜುಗಳನ್ನು ಹೊಂದಿರುವ ರಾಜ್ಯದ ಎಲ್ಲ ಖಾಸಗಿ ವಿಶ್ವವಿದ್ಯಾಲಯಗಳ ಕುಲಪತಿಗಳು, ಕುಲಾಧಿಪತಿಗಳು ಮತ್ತು ಕುಲಸಚಿವರ ಸಭೆಯಲ್ಲಿ ಗುರುವಾರ ಅವರು ಮಾತನಾಡಿದರು.</p>.<p>ಸದ್ಯ ಆಡಳಿತ ಮಂಡಳಿಯ ಕೋಟಾದ ಎಂಜಿನಿಯರಿಂಗ್ ಸೀಟುಗಳ ಭರ್ತಿಗೆ ಖಾಸಗಿ ವಿಶ್ವವಿದ್ಯಾಲಯಗಳು ಪ್ರತ್ಯೇಕವಾದ ಪ್ರವೇಶ ಪರೀಕ್ಷೆಗಳನ್ನು ನಡೆಸುತ್ತಿವೆ.</p>.<p>‘ಖಾಸಗಿ ವಿಶ್ವದ್ಯಾಲಯಗಳು ಸರ್ಕಾರಿ ಕೋಟಾದ ಎಂಜಿನಿಯರಿಂಗ್ ಸೀಟುಗಳನ್ನು ಸಿಇಟಿ ರ್ಯಾಂಕ್ ಮೇಲೆ ಭರ್ತಿ ಮಾಡಿಕೊಳ್ಳುತ್ತಿವೆ. ಆದರೆ, ಶೇ 60ರಷ್ಟು ಆಡಳಿತ ಮಂಡಳಿಯ ಸೀಟುಗಳನ್ನು ತಮ್ಮದೇ ಪ್ರತ್ಯೇಕ ಸಿಇಟಿ ಮೂಲಕ ವಿಶ್ವದ್ಯಾಲಯ<br />ಗಳು ಭರ್ತಿ ಮಾಡಿಕೊಳ್ಳುತ್ತಿವೆ. ಈ ರೀತಿ ಪ್ರತ್ಯೇಕ ಸಿಇಟಿಗಳಿಂದ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತದೆ. ಇದರ ಜತೆಗೆ ಒಂದೇ ಸಿಇಟಿ ಮಾಡುವಂತೆ ಸುಪ್ರೀಂ ಕೋರ್ಟ್ ಕೂಡ ಅಭಿಪ್ರಾಯ ವ್ಯಕ್ತಪಡಿಸಿದೆ. ಎಲ್ಲ ವಿಶ್ವವಿದ್ಯಾಲಯಗಳು ಸೇರಿಕೊಂಡು ಪ್ರತ್ಯೇಕ ಸಿಇಟಿ ಮಾಡಿಕೊಳ್ಳಿ’ ಎಂದು ಸಚಿವರು ಸಲಹೆ ನೀಡಿದರು.</p>.<p>ಪಿಇಎಸ್ ವಿಶ್ವವಿದ್ಯಾಲಯದ ಸಹ ಕುಲಾಧಿಪತಿ ಪ್ರೊ. ಜವಾಹರ, ‘ಕೆಇಎಯಿಂದಲೇ ರಾಷ್ಟ್ರ ಮಟ್ಟದಲ್ಲಿ ಒಂದೇ ಸಿಇಟಿ ಮಾಡುವುದಾದರೆ ನಮ್ಮದೇನೂ ಅಭ್ಯಂತರ ಇಲ್ಲ’ ಎಂದರು. ಆಗ ಸಚಿವರು, ‘ಎಲ್ಲ ವಿಶ್ವವಿದ್ಯಾಲಯಗಳು ಸಮಾಲೋಚಿಸಿ ನಿರ್ಧಾರಕ್ಕೆ ಬಂದರೆ ಸೂಕ್ತ’ ಎಂದು ಸಲಹೆ<br />ನೀಡಿದರು.</p>.<p>ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ. ಪ್ರದೀಪ್ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ರಾಜ್ಯದ ಎಲ್ಲ ಖಾಸಗಿ ವಿಶ್ವವಿದ್ಯಾಲಯಗಳು ಒಪ್ಪುವುದಾದರೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದಲೇ (ಕೆಇಎ) ರಾಷ್ಟ್ರಮಟ್ಟದಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಸಲು ಸರ್ಕಾರ ಸಿದ್ಧ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.</p>.<p>ಎಂಜಿನಿಯರಿಂಗ್ ಕಾಲೇಜುಗಳನ್ನು ಹೊಂದಿರುವ ರಾಜ್ಯದ ಎಲ್ಲ ಖಾಸಗಿ ವಿಶ್ವವಿದ್ಯಾಲಯಗಳ ಕುಲಪತಿಗಳು, ಕುಲಾಧಿಪತಿಗಳು ಮತ್ತು ಕುಲಸಚಿವರ ಸಭೆಯಲ್ಲಿ ಗುರುವಾರ ಅವರು ಮಾತನಾಡಿದರು.</p>.<p>ಸದ್ಯ ಆಡಳಿತ ಮಂಡಳಿಯ ಕೋಟಾದ ಎಂಜಿನಿಯರಿಂಗ್ ಸೀಟುಗಳ ಭರ್ತಿಗೆ ಖಾಸಗಿ ವಿಶ್ವವಿದ್ಯಾಲಯಗಳು ಪ್ರತ್ಯೇಕವಾದ ಪ್ರವೇಶ ಪರೀಕ್ಷೆಗಳನ್ನು ನಡೆಸುತ್ತಿವೆ.</p>.<p>‘ಖಾಸಗಿ ವಿಶ್ವದ್ಯಾಲಯಗಳು ಸರ್ಕಾರಿ ಕೋಟಾದ ಎಂಜಿನಿಯರಿಂಗ್ ಸೀಟುಗಳನ್ನು ಸಿಇಟಿ ರ್ಯಾಂಕ್ ಮೇಲೆ ಭರ್ತಿ ಮಾಡಿಕೊಳ್ಳುತ್ತಿವೆ. ಆದರೆ, ಶೇ 60ರಷ್ಟು ಆಡಳಿತ ಮಂಡಳಿಯ ಸೀಟುಗಳನ್ನು ತಮ್ಮದೇ ಪ್ರತ್ಯೇಕ ಸಿಇಟಿ ಮೂಲಕ ವಿಶ್ವದ್ಯಾಲಯ<br />ಗಳು ಭರ್ತಿ ಮಾಡಿಕೊಳ್ಳುತ್ತಿವೆ. ಈ ರೀತಿ ಪ್ರತ್ಯೇಕ ಸಿಇಟಿಗಳಿಂದ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತದೆ. ಇದರ ಜತೆಗೆ ಒಂದೇ ಸಿಇಟಿ ಮಾಡುವಂತೆ ಸುಪ್ರೀಂ ಕೋರ್ಟ್ ಕೂಡ ಅಭಿಪ್ರಾಯ ವ್ಯಕ್ತಪಡಿಸಿದೆ. ಎಲ್ಲ ವಿಶ್ವವಿದ್ಯಾಲಯಗಳು ಸೇರಿಕೊಂಡು ಪ್ರತ್ಯೇಕ ಸಿಇಟಿ ಮಾಡಿಕೊಳ್ಳಿ’ ಎಂದು ಸಚಿವರು ಸಲಹೆ ನೀಡಿದರು.</p>.<p>ಪಿಇಎಸ್ ವಿಶ್ವವಿದ್ಯಾಲಯದ ಸಹ ಕುಲಾಧಿಪತಿ ಪ್ರೊ. ಜವಾಹರ, ‘ಕೆಇಎಯಿಂದಲೇ ರಾಷ್ಟ್ರ ಮಟ್ಟದಲ್ಲಿ ಒಂದೇ ಸಿಇಟಿ ಮಾಡುವುದಾದರೆ ನಮ್ಮದೇನೂ ಅಭ್ಯಂತರ ಇಲ್ಲ’ ಎಂದರು. ಆಗ ಸಚಿವರು, ‘ಎಲ್ಲ ವಿಶ್ವವಿದ್ಯಾಲಯಗಳು ಸಮಾಲೋಚಿಸಿ ನಿರ್ಧಾರಕ್ಕೆ ಬಂದರೆ ಸೂಕ್ತ’ ಎಂದು ಸಲಹೆ<br />ನೀಡಿದರು.</p>.<p>ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ. ಪ್ರದೀಪ್ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>