ನಗರದಲ್ಲಿ ನೆಲೆಸಿರುವ ಕೇರಳದ ಜನರೊಂದಿಗೆ ಭಾನುವಾರ ಸಂವಾದ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಎರಡೂ ಮೈತ್ರಿಕೂಟಗಳು 70 ವರ್ಷಗಳಿಂದ ಕೇರಳದ ಜನರನ್ನು ಕತ್ತಲೆಯಲ್ಲಿಟ್ಟು, ರಾಜಕೀಯ ಮಾಡುತ್ತಿವೆ. ಎರಡೂ ಮೈತ್ರಿಕೂಟಗಳ ಆಡಳಿತ ಸಂಪೂರ್ಣ ವಿಫಲವಾಗಿದೆ. ಈ ಚುನಾವಣೆಯಲ್ಲಿ ಜನರು ಬದಲಾವಣೆ ಬಯಸುತ್ತಿದ್ದಾರೆ’ ಎಂದರು.