<p><strong>ಬೆಂಗಳೂರು:</strong> ‘ಒಳ ಮೀಸಲಾತಿ ಅನುಷ್ಠಾನ ಕುರಿತು ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗ ನೀಡಿರುವ ವರದಿಯ ಶಿಫಾರಸುಗಳನ್ನು ಯಥಾವತ್ ಜಾರಿಗೊಳಿಸಬೇಕು’ ಎಂದು ಕಾಂಗ್ರೆಸ್ನ ಎಡಗೈ ಸಮುದಾಯದ ನಾಯಕರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.</p>.<p>ಜಂಟಿ ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಮಾಜಿ ಸಂಸದ ಕೆ.ಎಚ್. ಮುನಿಯಪ್ಪ, ‘ಒಳ ಮೀಸಲಾತಿಯಿಂದ ಯಾವುದೇ ಸಮಸ್ಯೆ ಆಗುವುದಿಲ್ಲ. ಸದಾಶಿವ ಅವರು ವೈಜ್ಙಾನಿಕವಾಗಿಯೇ ವರದಿ ನೀಡಿದ್ದಾರೆ. ವರದಿ ಜಾರಿಯಾದರೂ ನಾವೆಲ್ಲ ಒಟ್ಟಾಗಿಯೇ ಇರುತ್ತೇವೆ. ಈ ವಿಚಾರದಲ್ಲಿ ಸರ್ಕಾರ ದೃಢ ನಿರ್ಧಾರ ತೆಗೆದುಕೊಳ್ಳಬೇಕು’ ಎಂದರು.</p>.<p>‘ಉಪ ಮುಖ್ಯಮಂತ್ರಿಯಾಗಿ ಗೋವಿಂದ ಕಾರಜೋಳ ಅವರೇ ಇದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮನಸ್ಸು ಮಾಡಿ ಜಾರಿ ಮಾಡಬೇಕು’ ಎಂದೂ ಮುನಿಯಪ್ಪ ಒತ್ತಾಯಿಸಿದರು.</p>.<p>‘ಪರಿಶಿಷ್ಟ ಸಮುದಾಯದಲ್ಲಿ ಎಡಗೈ, ಬಲಗೈ, ಬೋವಿ, ಲಂಬಾಣಿ ಸಮುದಾಯಗಳಿವೆ. ಪ್ರಸ್ತುತ ಸರಿಯಾದ ಪ್ರಮಾಣದಲ್ಲಿ ಮೀಸಲಾತಿ ಸಿಗುತ್ತಿಲ್ಲ. ಯಾವ ಸಮುದಾಯಗಳಿಗೂ ಅನ್ಯಾಯ ಆಗದ ರೀತಿಯಲ್ಲಿ ಮೀಸಲಾತಿ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಹೇಳಿದೆ’ ಎಂದರು.</p>.<p>‘ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ವರದಿ ಜಾರಿಗೆ ಮುಂದಾಗಿದ್ದರು. ಆದರೆ, ಚುನಾವಣೆ ಎದುರಾದ ಕಾರಣ ಅಲ್ಲಿಗೇ ಕೈಬಿಟ್ಟಿದ್ದರು. ಆದರೆ, ವರದಿ ಜಾರಿ ವಿಷಯದಲ್ಲಿ ಬಿಜೆಪಿಯವರು ಈ ಹಿಂದೆ ಸರಿಯಾಗಿ ಬೆಂಬಲಿಸಲಿಲ್ಲ. ಈಗ ಸರ್ಕಾರ ಬಿಜೆಪಿಯದ್ದೇ ಇದೆ. ಜೆಡಿಎಸ್, ಕಾಂಗ್ರೆಸ್ ಇದಕ್ಕೆ ವಿರೋಧಿಸಲ್ಲ. ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ವರದಿಯನ್ನು ಒಪ್ಪಿಕೊಳ್ಳಬೇಕು. ನಂತರ ಕೇಂದ್ರ ಸರ್ಕಾರಕ್ಕೆ ವರದಿ ಕಳುಹಿಸಬೇಕು’ ಎಂದೂ ಮುನಿಯಪ್ಪ ಒತ್ತಾಯಿಸಿದರು.</p>.<p>ವಿಧಾನಪರಿಷತ್ ಸದಸ್ಯ ಆರ್. ಧರ್ಮಸೇನ ಮಾತನಾಡಿ, ‘ನಾವು ತುಳಿತಕ್ಕೆ ಒಳಗಾದ ಸಮುದಾಯದವರು. ಸ್ಪೃಶ್ಯರನ್ನೂ ನಮ್ಮ ಗುಂಪಿಗೆ ಸೇರಿಸಲಾಗಿದೆ. ಇದರಿಂದ ಮೀಸಲಾತಿಯಲ್ಲಿ ನಮಗೆ ಸಮಸ್ಯೆಯಾಗಿದೆ’ ಎಂದರು.</p>.<p>‘ನಮ್ಮ ಮೀಸಲಾತಿಯಲ್ಲೇ ಸ್ಪೃಶ್ಯರಿಗೂ ಅವಕಾಶ ನೀಡಲಾಗಿದೆ. ಈಗ ಜನಸಂಖ್ಯೆಗೆ ಅನುಗುಣವಾಗಿ ನಮಗೆ ಒಳಮೀಸಲಾತಿ ನೀಡಬೇಕು. ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸುವ ಮೂಲಕ ಹೆಚ್ಚು ತುಳಿತಕ್ಕೆ ಒಳಗಾದವರನ್ನು ಮೇಲಕ್ಕೆತ್ತಬೇಕು’ ಎಂದು ಒತ್ತಾಯಿಸಿದರು.</p>.<p>ಮಾಜಿ ಸಂಸದ ಬಿ.ಎನ್. ಚಂದ್ರಪ್ಪ ಮಾತನಾಡಿ, ‘ಸದಾಶಿವ ಆಯೋಗ ವರದಿಯನ್ನು 2012ರಲ್ಲಿಯೇ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಈ ವರದಿಯನ್ನು 24 ಗಂಟೆಯೊಳಗೆ ಜಾರಿಗೆ ತರುತ್ತೇವೆ ಎಂದು ಬಿಜೆಪಿ ನಾಯಕರು ಹೇಳಿದ್ದರು. ಈಗ ಬಿಜೆಪಿ ಸರ್ಕಾರವೇ ಅಸ್ತಿತ್ವದಲ್ಲಿದೆ. ಈಗಲಾದರೂ ವರದಿಯನ್ನು ಜಾರಿಗೊಳಿಸಲಿ. ಎಲ್ಲ ಅಸ್ಪೃಶ್ಯರೂ ಒಟ್ಟಾಗಿ ಒಪ್ಪಿಕೊಳ್ಳುತ್ತೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಒಳ ಮೀಸಲಾತಿ ಅನುಷ್ಠಾನ ಕುರಿತು ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗ ನೀಡಿರುವ ವರದಿಯ ಶಿಫಾರಸುಗಳನ್ನು ಯಥಾವತ್ ಜಾರಿಗೊಳಿಸಬೇಕು’ ಎಂದು ಕಾಂಗ್ರೆಸ್ನ ಎಡಗೈ ಸಮುದಾಯದ ನಾಯಕರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.</p>.<p>ಜಂಟಿ ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಮಾಜಿ ಸಂಸದ ಕೆ.ಎಚ್. ಮುನಿಯಪ್ಪ, ‘ಒಳ ಮೀಸಲಾತಿಯಿಂದ ಯಾವುದೇ ಸಮಸ್ಯೆ ಆಗುವುದಿಲ್ಲ. ಸದಾಶಿವ ಅವರು ವೈಜ್ಙಾನಿಕವಾಗಿಯೇ ವರದಿ ನೀಡಿದ್ದಾರೆ. ವರದಿ ಜಾರಿಯಾದರೂ ನಾವೆಲ್ಲ ಒಟ್ಟಾಗಿಯೇ ಇರುತ್ತೇವೆ. ಈ ವಿಚಾರದಲ್ಲಿ ಸರ್ಕಾರ ದೃಢ ನಿರ್ಧಾರ ತೆಗೆದುಕೊಳ್ಳಬೇಕು’ ಎಂದರು.</p>.<p>‘ಉಪ ಮುಖ್ಯಮಂತ್ರಿಯಾಗಿ ಗೋವಿಂದ ಕಾರಜೋಳ ಅವರೇ ಇದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮನಸ್ಸು ಮಾಡಿ ಜಾರಿ ಮಾಡಬೇಕು’ ಎಂದೂ ಮುನಿಯಪ್ಪ ಒತ್ತಾಯಿಸಿದರು.</p>.<p>‘ಪರಿಶಿಷ್ಟ ಸಮುದಾಯದಲ್ಲಿ ಎಡಗೈ, ಬಲಗೈ, ಬೋವಿ, ಲಂಬಾಣಿ ಸಮುದಾಯಗಳಿವೆ. ಪ್ರಸ್ತುತ ಸರಿಯಾದ ಪ್ರಮಾಣದಲ್ಲಿ ಮೀಸಲಾತಿ ಸಿಗುತ್ತಿಲ್ಲ. ಯಾವ ಸಮುದಾಯಗಳಿಗೂ ಅನ್ಯಾಯ ಆಗದ ರೀತಿಯಲ್ಲಿ ಮೀಸಲಾತಿ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಹೇಳಿದೆ’ ಎಂದರು.</p>.<p>‘ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ವರದಿ ಜಾರಿಗೆ ಮುಂದಾಗಿದ್ದರು. ಆದರೆ, ಚುನಾವಣೆ ಎದುರಾದ ಕಾರಣ ಅಲ್ಲಿಗೇ ಕೈಬಿಟ್ಟಿದ್ದರು. ಆದರೆ, ವರದಿ ಜಾರಿ ವಿಷಯದಲ್ಲಿ ಬಿಜೆಪಿಯವರು ಈ ಹಿಂದೆ ಸರಿಯಾಗಿ ಬೆಂಬಲಿಸಲಿಲ್ಲ. ಈಗ ಸರ್ಕಾರ ಬಿಜೆಪಿಯದ್ದೇ ಇದೆ. ಜೆಡಿಎಸ್, ಕಾಂಗ್ರೆಸ್ ಇದಕ್ಕೆ ವಿರೋಧಿಸಲ್ಲ. ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ವರದಿಯನ್ನು ಒಪ್ಪಿಕೊಳ್ಳಬೇಕು. ನಂತರ ಕೇಂದ್ರ ಸರ್ಕಾರಕ್ಕೆ ವರದಿ ಕಳುಹಿಸಬೇಕು’ ಎಂದೂ ಮುನಿಯಪ್ಪ ಒತ್ತಾಯಿಸಿದರು.</p>.<p>ವಿಧಾನಪರಿಷತ್ ಸದಸ್ಯ ಆರ್. ಧರ್ಮಸೇನ ಮಾತನಾಡಿ, ‘ನಾವು ತುಳಿತಕ್ಕೆ ಒಳಗಾದ ಸಮುದಾಯದವರು. ಸ್ಪೃಶ್ಯರನ್ನೂ ನಮ್ಮ ಗುಂಪಿಗೆ ಸೇರಿಸಲಾಗಿದೆ. ಇದರಿಂದ ಮೀಸಲಾತಿಯಲ್ಲಿ ನಮಗೆ ಸಮಸ್ಯೆಯಾಗಿದೆ’ ಎಂದರು.</p>.<p>‘ನಮ್ಮ ಮೀಸಲಾತಿಯಲ್ಲೇ ಸ್ಪೃಶ್ಯರಿಗೂ ಅವಕಾಶ ನೀಡಲಾಗಿದೆ. ಈಗ ಜನಸಂಖ್ಯೆಗೆ ಅನುಗುಣವಾಗಿ ನಮಗೆ ಒಳಮೀಸಲಾತಿ ನೀಡಬೇಕು. ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸುವ ಮೂಲಕ ಹೆಚ್ಚು ತುಳಿತಕ್ಕೆ ಒಳಗಾದವರನ್ನು ಮೇಲಕ್ಕೆತ್ತಬೇಕು’ ಎಂದು ಒತ್ತಾಯಿಸಿದರು.</p>.<p>ಮಾಜಿ ಸಂಸದ ಬಿ.ಎನ್. ಚಂದ್ರಪ್ಪ ಮಾತನಾಡಿ, ‘ಸದಾಶಿವ ಆಯೋಗ ವರದಿಯನ್ನು 2012ರಲ್ಲಿಯೇ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಈ ವರದಿಯನ್ನು 24 ಗಂಟೆಯೊಳಗೆ ಜಾರಿಗೆ ತರುತ್ತೇವೆ ಎಂದು ಬಿಜೆಪಿ ನಾಯಕರು ಹೇಳಿದ್ದರು. ಈಗ ಬಿಜೆಪಿ ಸರ್ಕಾರವೇ ಅಸ್ತಿತ್ವದಲ್ಲಿದೆ. ಈಗಲಾದರೂ ವರದಿಯನ್ನು ಜಾರಿಗೊಳಿಸಲಿ. ಎಲ್ಲ ಅಸ್ಪೃಶ್ಯರೂ ಒಟ್ಟಾಗಿ ಒಪ್ಪಿಕೊಳ್ಳುತ್ತೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>