ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕಾರ್ಲ್ಯಾಂಡ್’ ಯೋಜನೆಗೆ ₹1,500 ಕೋಟಿ: ಸಚಿವ ಜೆ.ಸಿ.ಮಾಧುಸ್ವಾಮಿ

ನದಿ ಸಮುದ್ರ ಸೇರುವ ಸ್ಥಳದಲ್ಲಿ ತಡೆಗೋಡೆ
Last Updated 5 ಅಕ್ಟೋಬರ್ 2021, 20:31 IST
ಅಕ್ಷರ ಗಾತ್ರ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಪ್ರದೇಶದಲ್ಲಿ ನದಿಗಳು ಸಮುದ್ರ ಸೇರುವ ಜಾಗದಲ್ಲಿ ತಡೆಗೋಡೆ ನಿರ್ಮಿಸುವ ₹1,500 ಕೋಟಿಯ ‘ಕಾರ್ಲ್ಯಾಂಡ್’ ಯೋಜನೆಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಲಾಗಿದೆ.

ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

ಈ ಯೋಜನೆಯಡಿ ತಡೆಗೋಡೆ ನಿರ್ಮಿಸುವುದರಿಂದಸಮುದ್ರದ ನೀರು ನದಿಗೆ ನುಗ್ಗಿ ಉಪ್ಪಾಗುವುದನ್ನು ತಡೆಯಲಾಗುತ್ತದೆ. ಸಂಗ್ರಹವಾಗುವ ಸಿಹಿ ನೀರನ್ನು ಕೃಷಿ, ಸಿಗಡಿ ಸಾಕಾಣಿಕೆ ಮತ್ತು ಕುಡಿಯುವ ನೀರಿನ ಉದ್ದೇಶಕ್ಕೆ ಬಳಸಲು ಉದ್ದೇಶಿಸಲಾಗಿದೆ. ಈ ಯೋಜನೆಯಡಿ ಮೂರು ತಾಲ್ಲೂಕುಗಳಿಗೆ ತಲಾ ₹100 ಕೋಟಿಯಂತೆ ಒಟ್ಟು ₹300 ಕೋಟಿ ನೀಡಲು ಒಪ್ಪಿಗೆ ನೀಡಲಾಗಿದೆ ಎಂದರು.

ಇದು ಯಶಸ್ವಿಯಾದರೆ, ಮುಂದಿನ ಹಂತದಲ್ಲಿ ಮಾಸ್ಟರ್ ಪ್ಲ್ಯಾನ್‌ ಯೋಜನೆಯಡಿ ₹1,500 ಕೋಟಿ ವೆಚ್ಚದಲ್ಲಿ ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಕೈಗೆತ್ತಿಕೊಳ್ಳಲಾಗುವುದು. ಇದರಿಂದ ಸುಮಾರು 2–3 ತಿಂಗಳು ಸಿಹಿ ನೀರು ಶೇಖರಣೆಯಾಗುತ್ತದೆ ಎಂದು ಹೇಳಿದರು.

ಪ್ರಮುಖ ತೀರ್ಮಾನಗಳು

*ಉಡುಪಿ –ಖಾನಾಪುರ ಹೆದ್ದಾರಿಯಲ್ಲಿ 5 ಕಿ.ಮೀ ದ್ವಿಪಥ ನಿರ್ಮಿಸಲು ₹15 ಕೋಟಿ ಅನುದಾನಕ್ಕೆ ಒಪ್ಪಿಗೆ.

* ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿ 32 ಎಕರೆ ಪ್ರದೇಶವನ್ನು ಪವನ ವಿದ್ಯುತ್‌ ಘಟಕ ಸ್ಥಾಪಿಸಲು ರೋಹನ್ ಸೋಲಾರ್‌ ಕಂಪನಿಗೆ 30 ವರ್ಷಗಳ ಅವಧಿಗೆ ಗುತ್ತಿಗೆ ನೀಡಲು ಅನುಮೋದನೆ.

* ಉಡುಪಿ ಜಿಲ್ಲೆಯ ಹೆಬ್ರಿ ತಾಲ್ಲೂಕಿನಲ್ಲಿ ಒಂದು ಹೋಬಳಿ ಸೃಷ್ಟಿಸಲು ಒಪ್ಪಿಗೆ.

* ಸಂಧ್ಯಾ ಸುರಕ್ಷಾ ಯೋಜನೆಯಡಿ 60 ವರ್ಷದವರಿಗೆ ನೀಡುತ್ತಿರುವ ₹600 ಮಾಸಾಶನವನ್ನು ₹800 ಕ್ಕೂ 65 ವರ್ಷ ಮೇಲ್ಪಟ್ಟವರಿಗೆ ನೀಡುವ ₹1,000 ಮಾಸಾಶನವನ್ನು ₹1,200 ಕ್ಕೆ ಹೆಚ್ಚಿಸುವ ಕಾರ್ಯಕ್ರಮಕ್ಕೆ ಘಟನೋತ್ತರ ಅನುಮತಿ. 36 ಲಕ್ಷ ಜನರಿಗೆ ಇದರಿಂದ ಅನುಕೂಲವಾಗಲಿದ್ದು, ಸರ್ಕಾರಕ್ಕೆ ₹207 ಕೋಟಿ ವೆಚ್ಚವಾಗಲಿದೆ.

*ಮೈಸೂರು ಸಾಬೂನು ಮತ್ತು ಮಾರ್ಜಕ ಕಾರ್ಖನೆ ವತಿಯಿಂದ ಶಾಲಾ ವಿದ್ಯಾರ್ಥಿನಿಯರಿಗೆ ಶುಚಿ ಕಿಟ್‌ ಪೂರೈಕೆಗೆ ನಿರ್ಧಾರ.

*ಹಿಪ್ಪರಗಿ ಬ್ಯಾರೇಜ್‌ ರಕ್ಷಣೆಗೆ ತಡೆಗೋಡೆ ನಿರ್ಮಿಸಲು ₹28.2 ಕೋಟಿ ಅನುದಾನಕ್ಕೆ ಒಪ್ಪಿಗೆ.

*ಪೊಲೀಸ್‌ ಆಧುನೀಕರಣ ಯೋಜನೆ ಅಡಿ ₹14.5 ಕೋಟಿ ವೆಚ್ಚದಲ್ಲಿ ಇಲಾಖೆಗೆ ನಿಸ್ತಂತು ಸಂಪರ್ಕ ಜಾಲವನ್ನು ಮೇಲ್ದರ್ಜೆಗೇರಿಸಲು ಅನುಮತಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT