15 ಸಾಕ್ಷಿಗಳ ವಿಚಾರಣೆ ನಡೆಸಿದ್ದ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಪ್ರಕರಣಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಲಕ್ಷ್ಮೀನಾರಾಯಣ ಭಟ್ ಕೆ., 42 ದಾಖಲೆಗಳನ್ನೂ ಪರಿಶೀಲನೆ ನಡೆಸಿದ್ದರು. ಏಪ್ರಿಲ್ 6ರಂದು ಅಂತಿಮ ಆದೇಶ ಪ್ರಕಟಿಸಿದ್ದು, ‘ಚಿಕ್ಕಬೆಟ್ಟಯ್ಯ ಮತ್ತು ಮುನಿರಾಜು ದೋಷಿಗಳು’ ಎಂದು ಸಾರಿದ್ದಾರೆ. ಇಬ್ಬರಿಗೂ ತಲಾ ಎರಡು ವರ್ಷ ಸಾಧಾರಣ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.