‘ಅಸ್ಥಿಮಜ್ಜೆ ಕಸಿಯಲ್ಲಿ ರೋಗಿಯ ದೇಹದಲ್ಲಿ ಸಕ್ರಿಯವಾಗಿರುವ ಕ್ಯಾನ್ಸರ್ ಕಣಗಳನ್ನು ನಾಶಗೊಳಿಸಿ, ಅವರದೇ ದೇಹದ ಆರೋಗ್ಯ ಅಂಗದ ಒಂದಿಷ್ಟು ಮಜ್ಜೆಯನ್ನು ತೆಗೆಯಲಾಗುತ್ತದೆ. ಕ್ಯಾನ್ಸರ್ ಕಣಗಳು ನಾಶವಾದ ಜಾಗದಲ್ಲಿ ಕಸಿ ಮಾಡಲಾಗುತ್ತದೆ.ವಯಸ್ಕರ ಜತೆಗೆ ಮಕ್ಕಳಲ್ಲಿಯೂ ಕ್ಯಾನ್ಸರ್ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಹೆಚ್ಚಳವಾಗುತ್ತಿವೆ. ಈ ರೋಗ ಹಾಗೂ ತಪಾಸಣೆ ಬಗ್ಗೆ ಇನ್ನಷ್ಟು ಜಾಗೃತಿ ಮೂಡಿಸಬೇಕು. ಕ್ಯಾನ್ಸರ್ ಕೋಶಗಳನ್ನು ಎಷ್ಟು ಬೇಗ ಪತ್ತೆ ಮಾಡುತ್ತೇವೆಯೋ ಅಷ್ಟು ಬೇಗ ಗುಣಪಡಿಸಲು ಸಾಧ್ಯ’ ಎಂದು ಅವರು ಹೇಳಿದ್ದಾರೆ.