‘ಬೀದರ್ ಸೇರಿದಂತೆ ಹಲವು ಜಿಲ್ಲೆಗಳ ಬಡ ಜನರು ಕ್ಯಾನ್ಸರ್ ಚಿಕಿತ್ಸೆಗಾಗಿ ಕಿದ್ವಾಯಿ ಆಸ್ಪತ್ರೆಯನ್ನೇ ಅವಲಂಬಿಸಬೇಕಾಗಿದೆ. ಅವರು ದೂರದ ಊರುಗಳಿಂದ ಬೆಂಗಳೂರಿಗೆ ಬಂದು ಕಷ್ಟ ಪಡುವುದು ತಪ್ಪಬೇಕು. ಹೀಗಾಗಿ ಪ್ರದೇಶವಾರು ಆಸ್ಪತ್ರೆ ಸ್ಥಾಪನೆಗೆ ನಿರ್ಧರಿಸಿದ್ದೇವೆ. ಜೊತೆಗೆ ಬೆಂಗಳೂರಿನ ಉತ್ತರ ಭಾಗದಲ್ಲೂ ಕ್ಯಾನ್ಸರ್ ಕೇಂದ್ರ ಆರಂಭಿಸಲು ಚಿಂತಿಸಲಾಗಿದೆ. ಇದರಿಂದ ಕಿದ್ವಾಯಿ ಸಂಸ್ಥೆ ಮೇಲಿನ ಒತ್ತಡ ತಗ್ಗಲಿದೆ’ ಎಂದರು.