ಬೆಳಗಾವಿ: ‘ದೇಶದ ರೈತರ ಖಾತೆಗೆ ಈ ಬಾರಿಯ ಕಿಸಾನ್ ಸಮ್ಮಾನ್ ನಿಧಿಯ ಕಂತನ್ನು, ಪ್ರಧಾನಿ ನರೇಂದ್ರ ಮೋದಿ ಅವರು ಫೆ. 27ರಂದು ಬೆಳಗಾವಿಯಿಂದಲೇ ವರ್ಗಾಯಿಸಲಿದ್ದಾರೆ. ಬಿಜೆಪಿಯ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಅವರ ಜನ್ಮದಿನದಂದೇ ರೈತರಿಗೆ ಈ ಹಣ ಮುಟ್ಟಿಸುತ್ತಿರುವುದು ಖುಷಿ ತಂದಿದೆ’ ಎಂದು ಕೃಷಿ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.