‘ರೈತರು ಭೂಮಿಗೆ ಎಷ್ಟು ಅಗತ್ಯವೋ ಅಷ್ಟು ಪ್ರಮಾಣದಲ್ಲಿ ಮಾತ್ರ ಯೂರಿಯಾ ಬಳಸಬೇಕು. ಯಾವುದೇ ರಾಸಾಯನಿಕ ಔಷಧಿಯಾಗಲೀ ರಸಗೊಬ್ಬರವನ್ನಾಗಲೀ ಅಗತ್ಯಕ್ಕೆ, ಅವಶ್ಯಕತೆಗೆ ಮೀರಿ ಬಳಸಬಾರದು. ಹೀಗೆ ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಯೂರಿಯಾ ಬಳಸಿದರೆ ಭೂಮಿಯ ಫಲವತ್ತತೆ ಕ್ಷೀಣಿಸುವ ಸಾಧ್ಯತೆಯೂ ಇದೆ. ಹೀಗಾಗಿ ರೋಗಕ್ಕೆ ಎಷ್ಟು ಮದ್ದಿನ ಅಗತ್ಯ ಇದೆಯೊ ಅಷ್ಟನ್ನು ಮಾತ್ರ ಬಳಸಬೇಕು. ಯಾವುದೇ ರೋಗಕ್ಕಾಗಲೀ ಅಗತ್ಯಕ್ಕಿಂತ ಹೆಚ್ಚಿನ ಔಷಧಿ ಸೇವಿಸಿದಲ್ಲಿ ಅದು ವಿಷವಾಗಿ ಪರಿಣಮಿಸುವ ಸಾಧ್ಯತೆ ಹೆಚ್ಚು’ ಎಂದೂ ಸಚಿವರು ಕಿವಿಮಾತು ಹೇಳಿದರು.