ಗದಗ ಜಿಲ್ಲಾಧಿಕಾರಿ ಸುಂದರೇಶ್ಬಾಬು ಎಂ. ಅವರನ್ನು ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಿಸಲಾಗಿದೆ. ರಾಜ್ಯ ಚುನಾವಣಾ ಆಯೋಗದ ಕಾರ್ಯದರ್ಶಿ ಹೊನ್ನಾಂಬ ಅವರನ್ನು ಗದಗ ಜಿಲ್ಲಾಧಿಕಾರಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್. ಲತಾ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹುದ್ದೆಗೆ ವರ್ಗಾಯಿಸಿದ್ದು, ಆ ಹುದ್ದೆಯಲ್ಲಿದ್ದ ಕೆ. ಶ್ರೀನಿವಾಸ್ ಅವರಿಗೆ ಸ್ಥಳ ತೋರಿಸಿಲ್ಲ.