ಚನ್ನಮ್ಮನ ಕಿತ್ತೂರು (ಬೆಳಗಾವಿ ಜಿಲ್ಲೆ): ಈ ಭಾಗವನ್ನು ‘ಕಿತ್ತೂರು ಕರ್ನಾಟಕ’ ಎಂದು ಘೋಷಣೆ ಮಾಡಿದ ಬಳಿಕ ನಡೆಯುತ್ತಿರುವ ಕಿತ್ತೂರು ಉತ್ಸವಕ್ಕೆ ರಾಜ್ಯ ಸರ್ಕಾರ ₹ 2 ಕೋಟಿ ಅನುದಾನ ನೀಡಿದೆ. ಈ ಬಾರಿಯಿಂದ ರಾಜ್ಯಮಟ್ಟದ ಉತ್ಸವವಾಗಿಯೂ ಆಚರಿಸಲಾಗುತ್ತಿದೆ.
ಪಟ್ಟಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಶಾಸಕ ಮಹಾಂತೇಶ ದೊಡ್ಡಗೌಡ್ರ, ಅ.23, 24, 25ರಂದು ವೈಭವ ಮರುಕಳಿಸಲಿದೆ. ಅ.2ರಂದು ಬೆಂಗಳೂರಿನಿಂದ ಹೊರಡುವ ವೀರಜ್ಯೋತಿ ಯಾತ್ರೆಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ’ ಎಂದರು.