<p><strong>ಬೆಂಗಳೂರು: </strong>ಹಾಲಿನ ಸಂಸ್ಕರಣೆ, ಕಚ್ಚಾ ಸಾಮಗ್ರಿಗಳು, ವಿದ್ಯುತ್ ಶುಲ್ಕ, ಸಾಗಾಣಿಕೆ ವೆಚ್ಚದಲ್ಲಿನ ದರ ಏರಿಕೆಯನ್ನು ಆಧರಿಸಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ಗೆ ₹ 3ರಷ್ಟು ಹೆಚ್ಚಳ ಮಾಡುವಂತೆ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳದ (ಕೆಎಂಎಫ್) ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬೇಡಿಕೆ ಇಟ್ಟಿದ್ದಾರೆ.</p>.<p>ಈ ಕುರಿತು ಮಂಗಳವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಅಮೂಲ್ ಸೇರಿದಂತೆ ವಿವಿಧ ಸಹಕಾರ ಮತ್ತು ಖಾಸಗಿ ಹಾಲು ಉತ್ಪಾದನಾ ಸಂಸ್ಥೆಗಳು ಪ್ರತಿ ಲೀ.ಗೆ ₹ 8ರಿಂದ ₹ 10ರವರೆಗೆ ಹೆಚ್ಚಳ ಮಾಡಿವೆ. ರಾಜ್ಯದಲ್ಲಿ ಹಾಲಿನ ದರವನ್ನು ₹ 3ರಷ್ಟು ಹೆಚ್ಚಿಸಲು ಅನುಮತಿ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಲಾಗಿದೆ’ ಎಂದು ಹೇಳಿದ್ದಾರೆ.</p>.<p>ಪ್ರತಿ ಲೀ. ಹಾಲಿನ ದರವನ್ನು ₹ 3ರಷ್ಟು ಹೆಚ್ಚಳ ಮಾಡಲು ಅವಕಾಶ ನೀಡಿದರೆ ₹ 2 ಅನ್ನು ಹಾಲು ಉತ್ಪಾದಕ ರೈತರಿಗೆ ವರ್ಗಾಯಿಸಲಾಗುವುದು. ₹ 1 ಅನ್ನು ಹಾಲು ಉತ್ಪಾದಕರ ಸಹಕಾರ ಸಂಘ, ಹಾಲು ಒಕ್ಕೂಟಗಳು ಮತ್ತು ಮಾರಾಟಗಾರರಿಗೆ ನೀಡಲಾಗುವುದು ಎಂದು ತಿಳಿಸಿದ್ದಾರೆ.</p>.<p>ಎರಡು ವರ್ಷಗಳ ಅವಧಿಯಲ್ಲಿ ಕೆಎಂಎಫ್ ಮತ್ತು ರಾಜ್ಯದ 14 ಹಾಲು ಒಕ್ಕೂಟಗಳ ವಹಿವಾಟಿನಲ್ಲಿ ಶೇಕಡ 20ರಷ್ಟು ಹೆಚ್ಚಳವಾಗಿದೆ. 2021–22ರಲ್ಲಿ ₹ 19,732 ಕೋಟಿ ವಹಿವಾಟು ನಡೆದಿದೆ. 2022–23ರಲ್ಲಿ ₹ 25,000 ಕೋಟಿ ವಹಿವಾಟು ನಡೆಸುವ ಗುರಿ ಹೊಂದಲಾಗಿದೆ ಎಂದು ಹೇಳಿದ್ದಾರೆ.</p>.<p>ಪ್ರಸಕ್ತ ಸಾಲಿನಲ್ಲಿ ₹ 15.15 ಕೋಟಿಯನ್ನು ಹಾಲು ಉತ್ಪಾದಕರ ಸಹಕಾರ ಸಂಘಗಳ ಕಟ್ಟಡ ನಿರ್ಮಾಣಕ್ಕೆ ನೀಡಲಾಗುವುದು. ಪಶು ಸಂಗೋಪನೆಗೆ ಪ್ರೋತ್ಸಾಹ ನೀಡಲು ₹ 50 ಕೋಟಿ ಒದಗಿಸಲಾಗುವುದು. 2022–23ರಲ್ಲಿ ₹ 300 ಕೋಟಿ ಮೌಲ್ಯದ ಹಾಲು ಮತ್ತು ಹಾಲಿನ ಉತ್ಪನ್ನಗಳ ರಫ್ತು ಮಾಡುವ ಗುರಿಯನ್ನು ಕೆಎಂಎಫ್ ಹೊಂದಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಹಾಲಿನ ಸಂಸ್ಕರಣೆ, ಕಚ್ಚಾ ಸಾಮಗ್ರಿಗಳು, ವಿದ್ಯುತ್ ಶುಲ್ಕ, ಸಾಗಾಣಿಕೆ ವೆಚ್ಚದಲ್ಲಿನ ದರ ಏರಿಕೆಯನ್ನು ಆಧರಿಸಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ಗೆ ₹ 3ರಷ್ಟು ಹೆಚ್ಚಳ ಮಾಡುವಂತೆ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳದ (ಕೆಎಂಎಫ್) ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬೇಡಿಕೆ ಇಟ್ಟಿದ್ದಾರೆ.</p>.<p>ಈ ಕುರಿತು ಮಂಗಳವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಅಮೂಲ್ ಸೇರಿದಂತೆ ವಿವಿಧ ಸಹಕಾರ ಮತ್ತು ಖಾಸಗಿ ಹಾಲು ಉತ್ಪಾದನಾ ಸಂಸ್ಥೆಗಳು ಪ್ರತಿ ಲೀ.ಗೆ ₹ 8ರಿಂದ ₹ 10ರವರೆಗೆ ಹೆಚ್ಚಳ ಮಾಡಿವೆ. ರಾಜ್ಯದಲ್ಲಿ ಹಾಲಿನ ದರವನ್ನು ₹ 3ರಷ್ಟು ಹೆಚ್ಚಿಸಲು ಅನುಮತಿ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಲಾಗಿದೆ’ ಎಂದು ಹೇಳಿದ್ದಾರೆ.</p>.<p>ಪ್ರತಿ ಲೀ. ಹಾಲಿನ ದರವನ್ನು ₹ 3ರಷ್ಟು ಹೆಚ್ಚಳ ಮಾಡಲು ಅವಕಾಶ ನೀಡಿದರೆ ₹ 2 ಅನ್ನು ಹಾಲು ಉತ್ಪಾದಕ ರೈತರಿಗೆ ವರ್ಗಾಯಿಸಲಾಗುವುದು. ₹ 1 ಅನ್ನು ಹಾಲು ಉತ್ಪಾದಕರ ಸಹಕಾರ ಸಂಘ, ಹಾಲು ಒಕ್ಕೂಟಗಳು ಮತ್ತು ಮಾರಾಟಗಾರರಿಗೆ ನೀಡಲಾಗುವುದು ಎಂದು ತಿಳಿಸಿದ್ದಾರೆ.</p>.<p>ಎರಡು ವರ್ಷಗಳ ಅವಧಿಯಲ್ಲಿ ಕೆಎಂಎಫ್ ಮತ್ತು ರಾಜ್ಯದ 14 ಹಾಲು ಒಕ್ಕೂಟಗಳ ವಹಿವಾಟಿನಲ್ಲಿ ಶೇಕಡ 20ರಷ್ಟು ಹೆಚ್ಚಳವಾಗಿದೆ. 2021–22ರಲ್ಲಿ ₹ 19,732 ಕೋಟಿ ವಹಿವಾಟು ನಡೆದಿದೆ. 2022–23ರಲ್ಲಿ ₹ 25,000 ಕೋಟಿ ವಹಿವಾಟು ನಡೆಸುವ ಗುರಿ ಹೊಂದಲಾಗಿದೆ ಎಂದು ಹೇಳಿದ್ದಾರೆ.</p>.<p>ಪ್ರಸಕ್ತ ಸಾಲಿನಲ್ಲಿ ₹ 15.15 ಕೋಟಿಯನ್ನು ಹಾಲು ಉತ್ಪಾದಕರ ಸಹಕಾರ ಸಂಘಗಳ ಕಟ್ಟಡ ನಿರ್ಮಾಣಕ್ಕೆ ನೀಡಲಾಗುವುದು. ಪಶು ಸಂಗೋಪನೆಗೆ ಪ್ರೋತ್ಸಾಹ ನೀಡಲು ₹ 50 ಕೋಟಿ ಒದಗಿಸಲಾಗುವುದು. 2022–23ರಲ್ಲಿ ₹ 300 ಕೋಟಿ ಮೌಲ್ಯದ ಹಾಲು ಮತ್ತು ಹಾಲಿನ ಉತ್ಪನ್ನಗಳ ರಫ್ತು ಮಾಡುವ ಗುರಿಯನ್ನು ಕೆಎಂಎಫ್ ಹೊಂದಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>