ಕೊಡಗಿನಲ್ಲಿ ಧಾರಾಕಾರ ಮಳೆ: ಕಾಫಿ ಬೆಳೆಗಾರರ ಪರದಾಟ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಬುಧವಾರ ಧಾರಾಕಾರ ಮಳೆಯಾಗಿದ್ದು ಕಾಫಿ ಬೆಳೆಗಾರರು ಪರದಾಡುವಂತಾಗಿದೆ.
ಮಡಿಕೇರಿ, ವಿರಾಜಪೇಟೆ, ಗೋಣಿಕೊಪ್ಪಲು, ಬಾಳೆಲೆ, ದೇವರಪುರ, ತಾಳತ್ತಮನೆ, ಕಾಟಕೇರಿ, ಗಾಳಿಬೀಡು, ಮಾದಾಪುರ, ಭಾಗಮಂಡಲ ಸುತ್ತಮುತ್ತ ಮಳೆ ಆರ್ಭಟಿಸಿತು.
ಜಿಲ್ಲೆಯಲ್ಲಿ ಕಾಫಿ, ಭತ್ತದ ಕೊಯ್ಲು ನಡೆಯುತ್ತಿದ್ದು ಅಕಾಲಿಕ ಮಳೆಯಿಂದ ರೈತರಿಗೆ ನಷ್ಟವಾಗಿದೆ. ಕಾಫಿ ಒಣಗಿಸಲು ಸಾಧ್ಯವಾಗದೆ ಬೆಳೆಗಾರರು ಪರದಾಡುತ್ತಿದ್ದಾರೆ. ಕೊಯ್ಲು ಮಾಡದೆ ಉಳಿದಿರುವ ಕಾಫಿ ಹಣ್ಣು ನೆಲದ ಪಾಲಾಗುತ್ತಿದೆ. ಅಕಾಲಿಕ ಮಳೆಯಿಂದ ಕಾಫಿ ಕೊಯ್ಲಿಗೂ ಮುನ್ನವೇ ಹೂವು ಅರಳಿ ಮುಂದಿನ ವರ್ಷದ ಇಳುವರಿಯ ಮೇಲೂ ಪರಿಣಾಮ ಬೀರಲಿದೆ ಎಂದು ಬೆಳೆಗಾರರು ಆತಂಕ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.