ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಗಿನಲ್ಲಿ ಧಾರಾಕಾರ ಮಳೆ: ಕಾಫಿ ಬೆಳೆಗಾರರ ಪರದಾಟ

Last Updated 6 ಜನವರಿ 2021, 22:13 IST
ಅಕ್ಷರ ಗಾತ್ರ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಬುಧವಾರ ಧಾರಾಕಾರ ಮಳೆಯಾಗಿದ್ದು ಕಾಫಿ ಬೆಳೆಗಾರರು ಪರದಾಡುವಂತಾಗಿದೆ.

ಮಡಿಕೇರಿ, ವಿರಾಜಪೇಟೆ, ಗೋಣಿಕೊಪ್ಪಲು, ಬಾಳೆಲೆ, ದೇವರಪುರ, ತಾಳತ್ತಮನೆ, ಕಾಟಕೇರಿ, ಗಾಳಿಬೀಡು, ಮಾದಾಪುರ, ಭಾಗಮಂಡಲ ಸುತ್ತಮುತ್ತ ಮಳೆ ಆರ್ಭಟಿಸಿತು.

ಜಿಲ್ಲೆಯಲ್ಲಿ ಕಾಫಿ, ಭತ್ತದ ಕೊಯ್ಲು ನಡೆಯುತ್ತಿದ್ದು ಅಕಾಲಿಕ ಮಳೆಯಿಂದ ರೈತರಿಗೆ ನಷ್ಟವಾಗಿದೆ. ಕಾಫಿ ಒಣಗಿಸಲು ಸಾಧ್ಯವಾಗದೆ ಬೆಳೆಗಾರರು ಪರದಾಡುತ್ತಿದ್ದಾರೆ. ಕೊಯ್ಲು ಮಾಡದೆ ಉಳಿದಿರುವ ಕಾಫಿ ಹಣ್ಣು ನೆಲದ ಪಾಲಾಗುತ್ತಿದೆ. ಅಕಾಲಿಕ ಮಳೆಯಿಂದ ಕಾಫಿ ಕೊಯ್ಲಿಗೂ ಮುನ್ನವೇ ಹೂವು ಅರಳಿ ಮುಂದಿನ ವರ್ಷದ ಇಳುವರಿಯ ಮೇಲೂ ಪರಿಣಾಮ ಬೀರಲಿದೆ ಎಂದು ಬೆಳೆಗಾರರು ಆತಂಕ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT