<p><strong>ಬೆಂಗಳೂರು:</strong> ಸಾರಿಗೆ ನಿಗಮಗಳ ನೌಕರರ ಮುಷ್ಕರ ಶನಿವಾರವೂ ಮುಂದುವರಿಯಲಿದೆ. ಗುರಿ ಮುಟ್ಟುವವರೆಗೂ ಹೋರಾಟ ನಡೆಯಲಿದೆ ಎಂದು ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದರು.</p>.<p>ಶುಕ್ರವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಆರನೇ ವೇತನ ಆಯೋಗದ ಶಿಫಾರಸಿನಂತೆ ವೇತನ ಹೆಚ್ಚಳ ಮಾಡುವುದಿಲ್ಲ ಎಂದು ಸರ್ಕಾರ ಹೇಳಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇದಕ್ಕೆ ವೈಜ್ಞಾನಿಕ ಕಾರಣ ನೀಡಬೇಕು’ ಎಂದು ಆಗ್ರಹಿಸಿದರು.</p>.<p>ಶನಿವಾರ ಬೆಳಗಾವಿಯಲ್ಲಿ ಸಾರಿಗೆ ನೌಕರರ ಸಭೆ ನಡೆಯಲಿದೆ. ನಂತರ ಕಲಬುರ್ಗಿಯಲ್ಲಿ ಸಭೆ ನಡೆಸಲಾಗುವುದು. ಯುಗಾದಿ ಹಬ್ಬದ ದಿನ ಎಲ್ಲ ಕಡೆಗಳಲ್ಲಿ ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ಗಳ ಮೂಲಕ ಸಾರಿಗೆ ನೌಕರರ ಕುಟುಂಬದವರು ಸರ್ಕಾರಕ್ಕೆ ಮನವಿ ಪತ್ರಗಳನ್ನು ಸಲ್ಲಿಸಲಿದ್ದಾರೆ ಎಂದರು.</p>.<p>ಸಾರಿಗೆ ನಿಗಮಗಳ ನೌಕರರಿಗೆ ಮಾರ್ಚ್ ತಿಂಗಳ ವೇತನ ನೀಡಿಲ್ಲ. ಯುಗಾದಿ ಹಬ್ಬದ ಬೋನಸ್ ಕೂಡ ನಿರಾಕರಿಸಲಾಗಿದೆ. ಯುಗಾದಿ ಹಬ್ಬ ಸಾರಿಗೆ ನೌಕರರಿಗೆ ಕಹಿ ತಂದಿದೆ. ಹಬ್ಬದ ದಿನ ನೌಕರರು ತಟ್ಟೆ, ಲೋಟ ಬಡಿದು ಪ್ರತಿಭಟನೆ ನಡೆಸಲಿದ್ದಾರೆ ಎಂದರು.</p>.<p><strong>ಇದನ್ನೂ ಓದಿ... <a href="https://www.prajavani.net/karnataka-news/bus-employees-strike-ksrtc-bmtc-state-government-bs-yediyurappa-laxman-savadi-821110.html" target="_blank">ಮುಷ್ಕರ ನಿಷೇಧ: ಸಂಧಾನ ಸಭೆಯೂ ವಿಫಲ, ಮತ್ತಷ್ಟು ನೌಕರರ ವಜಾ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸಾರಿಗೆ ನಿಗಮಗಳ ನೌಕರರ ಮುಷ್ಕರ ಶನಿವಾರವೂ ಮುಂದುವರಿಯಲಿದೆ. ಗುರಿ ಮುಟ್ಟುವವರೆಗೂ ಹೋರಾಟ ನಡೆಯಲಿದೆ ಎಂದು ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದರು.</p>.<p>ಶುಕ್ರವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಆರನೇ ವೇತನ ಆಯೋಗದ ಶಿಫಾರಸಿನಂತೆ ವೇತನ ಹೆಚ್ಚಳ ಮಾಡುವುದಿಲ್ಲ ಎಂದು ಸರ್ಕಾರ ಹೇಳಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇದಕ್ಕೆ ವೈಜ್ಞಾನಿಕ ಕಾರಣ ನೀಡಬೇಕು’ ಎಂದು ಆಗ್ರಹಿಸಿದರು.</p>.<p>ಶನಿವಾರ ಬೆಳಗಾವಿಯಲ್ಲಿ ಸಾರಿಗೆ ನೌಕರರ ಸಭೆ ನಡೆಯಲಿದೆ. ನಂತರ ಕಲಬುರ್ಗಿಯಲ್ಲಿ ಸಭೆ ನಡೆಸಲಾಗುವುದು. ಯುಗಾದಿ ಹಬ್ಬದ ದಿನ ಎಲ್ಲ ಕಡೆಗಳಲ್ಲಿ ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ಗಳ ಮೂಲಕ ಸಾರಿಗೆ ನೌಕರರ ಕುಟುಂಬದವರು ಸರ್ಕಾರಕ್ಕೆ ಮನವಿ ಪತ್ರಗಳನ್ನು ಸಲ್ಲಿಸಲಿದ್ದಾರೆ ಎಂದರು.</p>.<p>ಸಾರಿಗೆ ನಿಗಮಗಳ ನೌಕರರಿಗೆ ಮಾರ್ಚ್ ತಿಂಗಳ ವೇತನ ನೀಡಿಲ್ಲ. ಯುಗಾದಿ ಹಬ್ಬದ ಬೋನಸ್ ಕೂಡ ನಿರಾಕರಿಸಲಾಗಿದೆ. ಯುಗಾದಿ ಹಬ್ಬ ಸಾರಿಗೆ ನೌಕರರಿಗೆ ಕಹಿ ತಂದಿದೆ. ಹಬ್ಬದ ದಿನ ನೌಕರರು ತಟ್ಟೆ, ಲೋಟ ಬಡಿದು ಪ್ರತಿಭಟನೆ ನಡೆಸಲಿದ್ದಾರೆ ಎಂದರು.</p>.<p><strong>ಇದನ್ನೂ ಓದಿ... <a href="https://www.prajavani.net/karnataka-news/bus-employees-strike-ksrtc-bmtc-state-government-bs-yediyurappa-laxman-savadi-821110.html" target="_blank">ಮುಷ್ಕರ ನಿಷೇಧ: ಸಂಧಾನ ಸಭೆಯೂ ವಿಫಲ, ಮತ್ತಷ್ಟು ನೌಕರರ ವಜಾ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>