ಕೋಲಾರ: ಕಳೆದ ವರ್ಷ ಹದಿನಾಲ್ಕರ ಹರೆಯದ ಬಾಲಕಿಯೊಬ್ಬಳನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರವೆಸಗಿದ್ದ ಬಂಗಾರಪೇಟೆ ತಾಲ್ಲೂಕಿನ ನಾಲ್ವರು ಯುವಕರಿಗೆ ಪೋಕ್ಸೊ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ಬಂಗಾರಪೇಟೆ ತಾಲ್ಲೂಕಿನ ಹೊಸಕೋಟೆ ಗ್ರಾಮದ ಆನಂದ್ (27), ಕಾಮಸಮುದ್ರ ಎ.ಕೆ. ಕಾಲೊನಿ ನಿವಾಸಿ ಪ್ರವೀಣ್ (21), ಕೆಜಿಎಫ್ ತಾಲ್ಲೂಕಿನ ತಿಮ್ಮಾಪುರ ಗ್ರಾಮದ ಕಾಂತರಾಜ್ (28) ಮತ್ತು ಬೆಂಗನೂರು ಗ್ರಾಮದ ವೇಣು (19) ಶಿಕ್ಷೆಗೆ ಒಳಗಾದ ಅತ್ಯಾಚಾರಿಗಳು.
ಜನ್ಮದಿನಕ್ಕೆ ಹೊಸ ಬಟ್ಟೆ ಕೊಡಿಸದ ತಾಯಿಯೊಂದಿಗೆ ಮುನಿಸಿಕೊಂಡ ಬಾಲಕಿ 2022ರ ಫೆಬ್ರುವರಿ 18ರಂದು ಬಂಗಾರಪೇಟೆ ಬಸ್ ನಿಲ್ದಾಣದಲ್ಲಿ ಕುಳಿತಿದ್ದಳು. ಬಾಲಕಿಯನ್ನು ಅಪಹರಿಸಿದ ಯುವಕರು ತನಿಮಡುಗು ಗ್ರಾಮದ ಬಾರ್ ಹಿಂಭಾಗದಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಈ ಸಂಬಂಧ ಬಂಗಾರಪೇಟೆ ತಾಲ್ಲೂಕಿನ ಕಾಮಸಮುದ್ರ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಬಿ.ಪಿ. ದೇವಮಾನೆ ಅವರು ಅಪರಾಧಿಗಳಿಗೆ ಶುಕ್ರವಾರ ಜೀವಾವಧಿ ಶಿಕ್ಷೆ ಹಾಗೂ ತಲಾ ₹25 ಸಾವಿರ ದಂಡ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಡಿ. ಲಲಿತಕುಮಾರಿ ವಾದ ಮಂಡಿಸಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.