<p><strong>ಕೋಲಾರ:</strong> ಜಮಾಅತೆ ಇಸ್ಲಾಮಿ ಹಿಂದ್ ಮತ್ತು ಜಾಮಿಯಾ ಮಸೀದಿ ಸಹಯೋಗದಲ್ಲಿ ನಗರದ ಎಂ.ಬಿ.ರಸ್ತೆಯ ನಲ್ಲಗಂಗಮ್ಮ ದೇವಾಲಯ ಪಕ್ಕದಲ್ಲಿರುವ ಜಾಮಿಯಾ ಮಸೀದಿಯಲ್ಲಿ ಸಾರ್ವಜನಿಕರಿಗಾಗಿ ‘ನಮ್ಮೂರ ಮಸೀದಿ ನೋಡ ಬನ್ನಿ’ ಮಸೀದಿ ದರ್ಶನ ಕಾರ್ಯಕ್ರಮ ಭಾನುವಾರ ನಡೆಯಿತು.</p>.<p>ಸಾರ್ವಜನಿಕರಲ್ಲಿ ಸೌಹಾರ್ದ, ಸಾಮರಸ್ಯ, ಸಹಬಾಳ್ವೆ ಮೂಡಿಸಲು, ಪರಸ್ಪರರನ್ನು ಅರಿಯಲು ತಪ್ಪುಕಲ್ಪನೆ-ಅಪನಂಬಿಕೆ ದೂರ ಮಾಡಲು ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ವಸ್ತು ಪ್ರದರ್ಶನ, ಪುಸ್ತಕ ಪ್ರದರ್ಶನ ಏರ್ಪಡಿಸಲಾಗಿತ್ತು. ಪ್ರಾತ್ಯಕ್ಷಿಕೆ ಕೂಡ ಇತ್ತು.</p>.<p>ಸರ್ವಧರ್ಮೀಯರು ಮಸೀದಿಗೆ ಭೇಟಿ ನೀಡಿ ನಮಾಜ್ ಆರಾಧನಾ ಪ್ರಕ್ರಿಯೆಗಳನ್ನು ವೀಕ್ಷಿಸಿದರು. ಮಹಿಳೆಯರಿಗೂ ಅವಕಾಶ ನೀಡಲಾಗಿತ್ತು. ಸಾರ್ವಜನಿಕರ ಅನುಮಾನ ಹಾಗೂ ಪ್ರಶ್ನೆಗಳಿಗೆ ಮಸೀದಿಯ ಮೊಹಮ್ಮದ್ ನವಾಜ್ ಉತ್ತರಿಸಿದರು.</p>.<p>'ಮಸೀದಿಯಲ್ಲಿ ದಿನಕ್ಕೆ ಐದು ಬಾರಿ ನಮಾಜ್ ನಡೆಯುತ್ತದೆ. ನಮಾಜ್ ಹಾಗೂ ಪ್ರಾರ್ಥನೆ ವೇಳೆ ಯಾವುದೇ ತಾರತಮ್ಯ ಇಲ್ಲ. ಎಲ್ಲಿ ಜಾಗ ಇರುತ್ತದೆಯೋ ಅಲ್ಲಿ ಪ್ರಾರ್ಥನೆ ಮಾಡಲು ನಿಲ್ಲಬೇಕು. ಅದು ಸಚಿವರಾದರೂ ಅಷ್ಟೇ' ಎಂದು ವಿಧಾನ ಪರಿಷತ್ ಸದಸ್ಯ ನಸೀರ್ ಅಹ್ಮದ್ ಹೇಳಿದರು.</p>.<p>ಕಾರ್ಯಕ್ರಮದಲ್ಲಿ ಶಾಸಕರಾದ ಕೆ.ಶ್ರೀನಿವಾಸಗೌಡ, ಕೆ.ಆರ್.ರಮೇಶ್ಕುಮಾರ್, ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ಕುಮಾರ್, ಜೆಡಿಎಸ್ ಮುಖಂಡ ಸಿ.ಎಂ.ಆರ್.ಶ್ರೀನಾಥ್ ಹಾಗೂ ಮಸೀದಿ ಆಡಳಿತ ಮಂಡಳಿ ಸದಸ್ಯರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ಜಮಾಅತೆ ಇಸ್ಲಾಮಿ ಹಿಂದ್ ಮತ್ತು ಜಾಮಿಯಾ ಮಸೀದಿ ಸಹಯೋಗದಲ್ಲಿ ನಗರದ ಎಂ.ಬಿ.ರಸ್ತೆಯ ನಲ್ಲಗಂಗಮ್ಮ ದೇವಾಲಯ ಪಕ್ಕದಲ್ಲಿರುವ ಜಾಮಿಯಾ ಮಸೀದಿಯಲ್ಲಿ ಸಾರ್ವಜನಿಕರಿಗಾಗಿ ‘ನಮ್ಮೂರ ಮಸೀದಿ ನೋಡ ಬನ್ನಿ’ ಮಸೀದಿ ದರ್ಶನ ಕಾರ್ಯಕ್ರಮ ಭಾನುವಾರ ನಡೆಯಿತು.</p>.<p>ಸಾರ್ವಜನಿಕರಲ್ಲಿ ಸೌಹಾರ್ದ, ಸಾಮರಸ್ಯ, ಸಹಬಾಳ್ವೆ ಮೂಡಿಸಲು, ಪರಸ್ಪರರನ್ನು ಅರಿಯಲು ತಪ್ಪುಕಲ್ಪನೆ-ಅಪನಂಬಿಕೆ ದೂರ ಮಾಡಲು ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ವಸ್ತು ಪ್ರದರ್ಶನ, ಪುಸ್ತಕ ಪ್ರದರ್ಶನ ಏರ್ಪಡಿಸಲಾಗಿತ್ತು. ಪ್ರಾತ್ಯಕ್ಷಿಕೆ ಕೂಡ ಇತ್ತು.</p>.<p>ಸರ್ವಧರ್ಮೀಯರು ಮಸೀದಿಗೆ ಭೇಟಿ ನೀಡಿ ನಮಾಜ್ ಆರಾಧನಾ ಪ್ರಕ್ರಿಯೆಗಳನ್ನು ವೀಕ್ಷಿಸಿದರು. ಮಹಿಳೆಯರಿಗೂ ಅವಕಾಶ ನೀಡಲಾಗಿತ್ತು. ಸಾರ್ವಜನಿಕರ ಅನುಮಾನ ಹಾಗೂ ಪ್ರಶ್ನೆಗಳಿಗೆ ಮಸೀದಿಯ ಮೊಹಮ್ಮದ್ ನವಾಜ್ ಉತ್ತರಿಸಿದರು.</p>.<p>'ಮಸೀದಿಯಲ್ಲಿ ದಿನಕ್ಕೆ ಐದು ಬಾರಿ ನಮಾಜ್ ನಡೆಯುತ್ತದೆ. ನಮಾಜ್ ಹಾಗೂ ಪ್ರಾರ್ಥನೆ ವೇಳೆ ಯಾವುದೇ ತಾರತಮ್ಯ ಇಲ್ಲ. ಎಲ್ಲಿ ಜಾಗ ಇರುತ್ತದೆಯೋ ಅಲ್ಲಿ ಪ್ರಾರ್ಥನೆ ಮಾಡಲು ನಿಲ್ಲಬೇಕು. ಅದು ಸಚಿವರಾದರೂ ಅಷ್ಟೇ' ಎಂದು ವಿಧಾನ ಪರಿಷತ್ ಸದಸ್ಯ ನಸೀರ್ ಅಹ್ಮದ್ ಹೇಳಿದರು.</p>.<p>ಕಾರ್ಯಕ್ರಮದಲ್ಲಿ ಶಾಸಕರಾದ ಕೆ.ಶ್ರೀನಿವಾಸಗೌಡ, ಕೆ.ಆರ್.ರಮೇಶ್ಕುಮಾರ್, ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ಕುಮಾರ್, ಜೆಡಿಎಸ್ ಮುಖಂಡ ಸಿ.ಎಂ.ಆರ್.ಶ್ರೀನಾಥ್ ಹಾಗೂ ಮಸೀದಿ ಆಡಳಿತ ಮಂಡಳಿ ಸದಸ್ಯರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>