ಮಹೇಶ್ ಸೇವೆ ರಾಜ್ಯಕ್ಕೆ ಆಗಲಿ. ಅಷ್ಟು ಶಕ್ತಿ ಅವರಿಗಿದೆ. ವಿಜಯೇಂದ್ರ ಅವರು ವಾರಕ್ಕೆ ಒಮ್ಮೆ ಆ ಭಾಗದಲ್ಲಿ ಸುತ್ತಾಡಿ ಪಕ್ಷದ ಸಂಘಟನೆಯನ್ನು ಗಟ್ಟಿ ಮಾಡಿದ್ದಾರೆ. ವಿಜಯೇಂದ್ರ ಶ್ರಮಕ್ಕೆ ಮಹೇಶ್ ಶಕ್ತಿ ಸೇರಿದರೆ, ಮುಂದಿನ ದಿನಗಳಲ್ಲಿ ಆ ಭಾಗದಲ್ಲಿ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಜಯಬೇರಿ ಭಾರಿಸುತ್ತದೆ. ಯಡಿಯೂರಪ್ಪ ಕಾರಣದಿಂದ ಆ ಭಾಗದಲ್ಲಿ ಸಾಮರಸ್ಯ, ಸಹೋದರತ್ವ ಭಾವನೆಯ ನೆಲೆಗಟ್ಟು ಸ್ಥಾಪನೆ ಆಗಿದೆ. ಇನ್ನೂ ಹಲವು ಸಮುದಾಯದ ನಾಯಕರು ಬಿಜೆಪಿ ಸೇರುತ್ತಾರೆ ಎಂದರು.