ಬೆಂಗಳೂರು: ರೈಲ್ವೆ ನಿಲ್ದಾಣಗಳಲ್ಲಿ ಅಂಗವಿಕಲರು ಓಡಾಡಲುಪ್ರತ್ಯೇಕ ಇಳಿಜಾರು ಪಥ ನಿರ್ಮಿಸುವಂತೆ ಕೋರಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ ಕೊಂಕಣ ರೈಲ್ವೆ ನಿಗಮಕ್ಕೆ (ಕೆಆರ್ಸಿಎಲ್) ನೋಟಿಸ್ ನೀಡಲುಹೈಕೋರ್ಟ್ ಆದೇಶಿಸಿದೆ.
ಕಾರವಾರದ ರೈಲ್ವೆ ಯಾತ್ರಿ ಸಮಿತಿ ಅಧ್ಯಕ್ಷ ಜಾರ್ಜ್ ಫರ್ನಾಂಡೀಸ್ ಮತ್ತು ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸತೀಶ್ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ಪೀಠ, ಈ ಆದೇಶ ನೀಡಿತು.
‘ಅಂಗವಿಕಲರು ಎಲ್ಲರಂತೆ ತಳ್ಳಾಟ–ನೂಕಾಟದಲ್ಲಿ ತೆರಳಲು ಸಾಧ್ಯವಾಗುವುದಿಲ್ಲ. ಸುಪ್ರೀಂ ಕೋರ್ಟ್ ಆದೇಶದಂತೆ ಅಂಗವಿಕಲರಿಗೆ ಮತ್ತು ಹಿರಿಯ ನಾಗರಿಕರಿಗಾಗಿಯೇ ಪ್ರತ್ಯೇಕ ಇಳಿಜಾರು ಪಥ ನಿರ್ಮಾಣ ಮಾಡಬೇಕು. ಈ ಸಂಬಂಧ ಕೊಂಕಣ ರೈಲ್ವೆ ನಿಗಮಕ್ಕೆ ನಿರ್ದೇಶನ ನೀಡಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.