ಗಂಗಾವತಿ ನಗರದಲ್ಲಿ ಯಾವುದೇ ಅಹಿತಕರ ಘಟನೆ, ಗಲಭೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಹನುಮಮಾಲಾ ವಿಸರ್ಜನೆಗೆ 1.300 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಭಾನುವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ನೇತೃತ್ವದಲ್ಲಿ ಗಂಗಾವತಿಯ ಸಿಬಿಎಸ್, ಮಹಾವೀರ, ಗಾಂಧಿ, ಬನ್ನಿಗಿಡದ ಕ್ಯಾಂಪ್, ಕೃಷ್ಣದೇವರಾಯ ವೃತ್ತದಲ್ಲಿ ಪಥ ಸಂಚಲನ ಜರುಗಿತು.