‘ದೇವೇಗೌಡ ಅವರು ಸ್ವಂತ ತಮ್ಮನ ಕುಟುಂಬಕ್ಕೆ ಒಳ್ಳೆಯದನ್ನು ಮಾಡದವರು ಒಕ್ಕಲಿಗ ಸಮುದಾಯಕ್ಕೆ ಇನ್ನೇನು ಒಳ್ಳೆಯದನ್ನು ಮಾಡುತ್ತಾರೆ. ಅವರು ಜಾತಿವಾದಿಯಲ್ಲ. ಬದಲಾಗಿ ಕುಟುಂಬವಾದಿ. ಇಲ್ಲಿವರೆಗೆ ಎಷ್ಟು ಜನ ಒಕ್ಕಲಿಗರಿಗೆ ಒಳ್ಳೆದನ್ನು ಮಾಡಿದ್ದಾರೆ. ಅವಕಾಶವಾದಿಗಳನ್ನ ಹೇಗೆ ನಂಬೋದು. ಡಿ.ಕೆ.ಶಿವಕುಮಾರ್ ಅಧ್ಯಕ್ಷರಾಗಿ ಬಂದ ಮೇಲೆ ಕಾಂಗ್ರೆಸ್ಗೆ ಶಕ್ತಿ ಬಂದಿದೆ. ಒಕ್ಕಲಿಗ ಸಮುದಾಯ ಡಿ.ಕೆ.ಶಿವಕುಮಾರ್ ಅವರ ಬೆಂಬಲಕ್ಕೆ ನಿಂತಲ್ಲಿ ಹೆಚ್ಚಿನ ಅನುಕೂಲವಾಗಲಿದೆ’ ಎಂದರು.