ಸಹಾಯಧನ ಹೆಚ್ಚಳದಿಂದ ಉಂಟಾಗುವ ಹೊರೆಯನ್ನು ಭರಿಸುವುದಕ್ಕಾಗಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಒಂದು ವರ್ಷದ ಅವಧಿಗೆ ಅನಗತ್ಯ ವೆಚ್ಚ ಮತ್ತು ಅನಿವಾರ್ಯವಲ್ಲದ ಯೋಜನೆಗಳಿಗೆ ಕಡಿವಾಣ ಹಾಕಲಾಗುವುದು. ಪರಿಶಿಷ್ಟ ಜಾತಿಯ ಜನರಿಗೆ ವಸತಿ,ಶೌಚಾಲಯ, ಶುದ್ಧ ಕುಡಿಯುವ ನೀರು, ಉತ್ತಮವಾದ ಆರೋಗ್ಯ ಸೌಲಭ್ಯ ಹಾಗೂ ಶಿಕ್ಷಣಕ್ಕೆ ನೆರವು ನೀಡುವುದಕ್ಕೆ ಆದ್ಯತೆ ನೀಡಲಾಗುವುದು ಎಂದರು.