ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಟಿ ಚೆನ್ನಯರ ಅವಹೇಳನ| ಗರಡಿಯಲ್ಲಿ ಕ್ಷಮೆಯಾಚಿಸಿದ ಜಗದೀಶ್ ಅಧಿಕಾರಿ

Last Updated 9 ಫೆಬ್ರುವರಿ 2021, 16:22 IST
ಅಕ್ಷರ ಗಾತ್ರ

ಮೂಡುಬಿದಿರೆ: ಬಿಲ್ಲವರ ಆರಾಧ್ಯ ದೈವಗಳಾದ ಕೋಟಿ ಚೆನ್ನಯರ ಬಗ್ಗೆ ನಿಂದನಾತ್ಮಕ ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿದ್ದ ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಜಗದೀಶ್ ಅಧಿಕಾರಿ, ಮಂಗಳವಾರ ಕೆಲ್ಲಪುತ್ತಿಗೆಯ ಪುರಾತನ ಕ್ಷೇತ್ರ ಭೂತರಾಜಗುಡ್ಡೆಯ ಧರ್ಮರಸು ದೈವ, ಕುಕ್ಕಿನಂತಾಯ, ಕೊಡಮಣಿತ್ತಾಯ, ಬ್ರಹ್ಮ ಬೈದರ್ಕಳ ಗರಡಿಗೆ ಭೇಟಿ ನೀಡಿ, ತಪ್ಪು ಕಾಣಿಕೆ ಸಲ್ಲಿಸಿ, ಕ್ಷಮೆಯಾಚಿಸಿದರು.

‘ನನ್ನಿಂದಾದ ತಪ್ಪಿಗೆ ಕೋಟಿ ಚೆನ್ನಯರ ಗರಡಿಯಲ್ಲಿ ಕ್ಷಮೆಯಾಚಿಸಿ, ತಪ್ಪು ಕಾಣಿಕೆ ಸಲ್ಲಿಸಿ ವಿವಾದಗಳಿಗೆ ಇತಿಶ್ರೀ ನೀಡಲು ನಿರ್ಧರಿಸಿದ್ದೇನೆ. ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ಅವರ ನಿವಾಸಕ್ಕೆ ತೆರಳಿ, ಅವರಲ್ಲಿ ಕ್ಷಮೆಯಾಚಿಸುತ್ತೇನೆ. ಕುದ್ರೋಳಿ, ಗೆಜ್ಜೆಗಿರಿ ಕ್ಷೇತ್ರಕ್ಕೆ ತೆರಳಿ ತಪ್ಪು ಕಾಣಿಕೆ ಸಲ್ಲಿಸಿ, ಕ್ಷಮೆಕೋರುತ್ತೇನೆ’ ಎಂದು ಜಗದೀಶ್ ಅಧಿಕಾರಿ ಹೇಳಿದ್ದಾರೆ.

3 ದಿನಗಳಲ್ಲಿ ಕ್ಷಮೆಯಾಚಿಸದಿದ್ದರೆ, ಜಗದೀಶ್‌ ಅಧಿಕಾರಿ ಮುಖಕ್ಕೆ ಮಸಿ ಬಳಿದವರಿಗೆ ₹1 ಲಕ್ಷ ಬಹುಮಾನ ಕೊಡುವುದಾಗಿ ಸೋಮವಾರ ಕಾಂಗ್ರೆಸ್‌ ನಾಯಕಿ ಪ್ರತಿಭಾ ಕುಳಾಯಿ ಘೋಷಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT