ಎಲ್ಲ ಸರ್ಕಾರಿ ಕಚೇರಿಗಳು,ಶಾಲಾ–ಕಾಲೇಜುಗಳು, ವಿಶ್ವವಿದ್ಯಾಲಯಗಳು, ತಾಲ್ಲೂಕು ಕೇಂದ್ರಗಳು, ದೆಹಲಿ ಕನ್ನಡ ಸಂಘ, ಹೊರನಾಡು, ಗಡಿನಾಡ ಕನ್ನಡ ಸಂಘಗಳ ಕಚೇರಿ, ವಿಧಾನಸೌಧದ ಮೆಟ್ಟಿಲು ಹಾಗೂ ವಿಧಾನಸೌಧ– ವಿಕಾಸ ಸೌಧದ ಮಧ್ಯೆ ಇರುವ ಗಾಂಧಿ ಪ್ರತಿಮೆ ಎದುರು, ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಸಮೂಹ ಗಾಯನ ನಡೆಸುವರು ಎಂದು ತಿಳಿಸಿದರು.