ಬಿಜೆಪಿ ಖಂಡನೆ: ಘಟನೆಯನ್ನು ಖಂಡಿಸಿರುವ ರಾಜ್ಯ ಬಿಜೆಪಿ 'ಡಿ.ಕೆ.ಶಿವಕುಮಾರ್ ಸಾರ್ವಜನಿಕ ಜೀವನದಲ್ಲಿ ಇದ್ದುಕೊಂಡು ಮಾಧ್ಯಮಗಳ ಎದುರು ವ್ಯಕ್ತಿಗೆ ಹಲ್ಲೆ ನಡೆಸಿರುವುದು ಅವರ ಉಗ್ರ ಮನಸ್ಥಿತಿಯನ್ನು ತೋರಿಸುತ್ತದೆ. ಹಿಂದೆ ಸೆಲ್ಫಿ ತೆಗೆಯಲು ಬಂದ ಕಾರ್ಯಕರ್ತನ ಮೇಲೆ ಡಿಕೆಶಿ ಹಲ್ಲೆ ಮಾಡಿದ್ದರು. ಡಿಕೆಶಿ ಅವರೇ ನೀವು ರಾಜಕಾರಣಿಯೋ, ರೌಡಿಯೋ' ಎಂದು ಪ್ರಶ್ನಿಸಿ ಟ್ವೀಟ್ ಮಾಡಿದೆ.