ಕನಕಪುರದಲ್ಲಿ ಭಾನುವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು ‘ಮಾತನಾಡಿದರೆ ಎಲ್ಲಿ ನಮ್ಮ ಸ್ಥಾನ, ಅಧಿಕಾರ ಹೋಗುತ್ತದೆ ಎಂದು ರಾಜ್ಯದ ಸಂಸದರು ಹಾಗೂ ಸಚಿವರು ಮೋದಿ ಎದುರು ಮಾತನಾಡಲು ಹೆದರುತ್ತಿದ್ದಾರೆ. ಬೊಮ್ಮಾಯಿ, ಪ್ರಲ್ಹಾದ ಜೋಶಿ, ಜಗದೀಶ ಶೆಟ್ಟರ್ ಮೊದಲಾದವರ ಉಸಿರು ನಿಂತು ಹೋಗಿದೆ. ಹೀಗಾಗಿಯೇ ಮೇಕೆದಾಟು, ಮಹದಾಯಿ ಸೇರಿದಂತೆ ಎಲ್ಲ ವಿಚಾರಗಳಲ್ಲೂ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ’ ಎಂದು ಟೀಕಿಸಿದರು.