ಎಲ್. ಹನುಮಂತಯ್ಯ ಮಾತನಾಡಿ, ‘ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳಲ್ಲಿ ಮಾದಿಗ ಸಮುದಾಯದವರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಈ ಸಮುದಾಯದ ಬೆಂಬಲದಿಂದಲೇ ಕಾಂಗ್ರೆಸ್ ಇಷ್ಟು ವರ್ಷ ಅಧಿಕಾರ ಮಾಡಿದೆ. ನಮ್ಮ ಸಮುದಾಯ ಕಾಂಗ್ರೆಸ್ನ ನಿರಂತರ ಬೆಂಬಲಿಗರು. ಈಗ ಕಾಂಗ್ರೆಸ್ ಮೇಲೆ ಬೇರೆ ರೀತಿಯ ಅಭಿಪ್ರಾಯ ಬರಬಾರದು. ನಮ್ಮ ಸಮುದಾಯವನ್ನು ಬಿಟ್ಟು ಕಾಂಗ್ರೆಸ್ ಬೆಳೆಯಲು ಸಾಧ್ಯವಿಲ್ಲ. ಹೀಗಾಗಿ, ಕಾರ್ಯಾಧ್ಯಕ್ಷ ಸ್ಥಾನ ನೀಡುವಂತೆ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಬಳಿ ಒತ್ತಾಯಿಸಿದ್ದೇವೆ. ಇದು ನಮ್ಮ ನಾಯಕರಿಗೂ ಮನವರಿಕೆಯಾಗಿದೆ’ ಎಂದರು.