ಕೆಪಿಸಿಸಿ ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು ಸೇರಿದಂತೆ ವಿವಿಧ ಹಂತದ ಪದಾಧಿಕಾರಿಗಳ ನೇಮಕಾತಿ ಬಹುದಿನಗಳಿಂದ ಬಾಕಿ ಇದೆ. ಜಿಲ್ಲಾಧ್ಯಕ್ಷರ ನೇಮಕದ ಸಂಬಂಧ ಆಯಾ ಜಿಲ್ಲೆಗಳಿಂದ ಅಭಿಪ್ರಾಯವನ್ನೂ ಪಡೆಯಲಾಗಿತ್ತು. ಎಲ್ಲ ಮಾಹಿತಿಯನ್ನು ಮುಂದಿಟ್ಟುಕೊಂಡು ಪಕ್ಷದ ಸಂಘಟನೆ ಬಲಪಡಿಸಲು ಅವಶ್ಯ ಇರುವವರನ್ನು ನೇಮಕ ಮಾಡುವ ಬಗ್ಗೆ ರಾಜ್ಯದ ನಾಯಕರ ಜತೆ ಹಲವು ಸುತ್ತಿನ ಸಮಾಲೋಚನೆಯನ್ನೂ ಶಿವಕುಮಾರ್ ನಡೆಸಿದ್ದರು.