ಇದೇ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ಡಿ.ಕೆ ಶಿವಕುಮಾರ್, ‘ಸಾರ್ವಜನಿಕರಲ್ಲಿ ಮನವಿ: ಬಿಜೆಪಿ ನಾಯಕರ ಕಾರು ನಿಮ್ಮ ಪಕ್ಕದಲ್ಲಿ ಹೋಗುವಾಗ ನಿಮ್ಮ ಫೋನ್ ಕ್ಯಾಮರಾದಿಂದ ರೆಕಾರ್ಡ್ ಮಾಡಿಕೊಳ್ಳಿ. ಯಾವಾಗ, ಯಾರ ಮೇಲೆ ಕಾರು ಹತ್ತಿಸಿ ಕೊಲ್ಲುತ್ತಾರೆ ತಿಳಿಯುವುದಿಲ್ಲ. ಹೀಗಿದ್ದಾಗ, ನಿಮ್ಮ ವಿಡಿಯೊ ಮುಂದೆ ಮಹತ್ವದ ಸಾಕ್ಷ್ಯವಾಗಿರಲಿದೆ. ಇದು ದೇಶಕ್ಕೆ ನೀವು ನೀಡುವ ಉತ್ತಮ ಕೊಡುಗೆಯಾಗಿರಲಿದೆ,‘ ಎಂದು ಗೇಲಿ ಮಾಡಿದ್ದಾರೆ.