ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಹುಲ್‌ ಭೇಟಿಯಾದ ಡಿಕೆಶಿ: ಮಾತುಕತೆ ವಿವರ ನೀಡದ ಕೆಪಿಸಿಸಿ ಅಧ್ಯಕ್ಷ

ಅಕ್ಷರ ಗಾತ್ರ

ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.‌ ಶಿವಕುಮಾರ್‌ ಅವರು ಮಂಗಳವಾರ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಚರ್ಚಿಸಿದರು.

ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾದ ಬಳಿಕ ಮೊದಲ‌ ಬಾರಿಗೆ ದೆಹಲಿಯಲ್ಲಿ ಪಕ್ಷದ ವರಿಷ್ಠರನ್ನು ಕಂಡು ರಾಜ್ಯ ರಾಜಕೀಯ ಬೆಳವಣಿಗೆ ಕುರಿತು ಈ ಸಂದರ್ಭ ಚರ್ಚಿಸಿದ್ದಾಗಿ ಅವರು ಭೇಟಿಯ ನಂತರ ಸುದ್ದಿಗಾರರಿಗೆ ತಿಳಿಸಿದರು.

ಆದರೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಯಾರಾಗಬೇಕು ಎಂಬ ಕುರಿತು ಪಕ್ಷದ ಶಾಸಕರು ಹೇಳಿಕೆ ನೀಡುತ್ತಿರುವ ಬಗ್ಗೆ ರಾಹುಲ್ ಜೊತೆ ಚರ್ಚಿಸಲಾಗಿದೆಯಾ ಎಂಬ ಪ್ರಶ್ನೆಗೆ ಅವರು ಪ್ರತಿಕ್ರಿಯೆ ನೀಡಲಿಲ್ಲ.

ಭೇಟಿಯ ವೇಳೆ ನಡೆದ ಮಾತುಕತೆಯ ವಿವರ ನೀಡಲು ಸಾಧ್ಯವಿಲ್ಲ. ರಾಜ್ಯ ರಾಜಕೀಯ ಬೆಳವಣಿಗೆ ಹಾಗೂ ಪಕ್ಷದ ಸ್ಥಿತಿಗತಿಕುರಿತು ಮಾಹಿತಿ ನೀಡಲಾಗಿದೆ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT