ಪಕ್ಷದ ಹಲವು ನಾಯಕರೊಡನೆ ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಅವರು,‘ಶಾಸಕ ಕೃಷ್ಣ ಬೈರೇಗೌಡ, ಮಾಜಿ ಮೇಯರ್ ಜಿ. ಪದ್ಮಾವತಿ ಸೇರಿ ಹಲವರು ಸಮಿತಿಯಲ್ಲಿರುತ್ತಾರೆ. ಈ ಸಮಿತಿಯು ಪ್ರವಾಹದಿಂದ ಹಾನಿಯಾಗಿರುವ ಸ್ಥಳಗಳಿಗೆ ಭೇಟಿ ನೀಡಿ, ಅಧ್ಯಯನ ನಡೆಸಲಿದೆ. 15 ದಿನಗಳಲ್ಲಿ ಸಮಿತಿ ವರದಿ ಸಲ್ಲಿಸಲಿದೆ. ಬೆಂಗಳೂರಿನ ಜನರ ಅಭಿಪ್ರಾಯಕ್ಕೆ ಧ್ವನಿಯಾಗುವುದು ಈ ಅಧ್ಯಯನದ ಹಿಂದಿನ ಉದ್ದೇಶ’ ಎಂದಿದ್ದಾರೆ.