ರಾಜ್ಯದಲ್ಲಿ ಜನ ಬದಲಾವಣೆ ಬಯಸುತ್ತಿದ್ದಾರೆ. ಅದು ಎರಡೂ ಕ್ಷೇತ್ರಗಳ ಫಲಿತಾಂಶಗಳಲ್ಲಿ ವ್ಯಕ್ತವಾಗಿರುವ ಅಂಶ. ಹಾನಗಲ್ನಲ್ಲಿ ಮುಖ್ಯಮಂತ್ರಿ, ಅವರ ಅಳಿಯ, ಇಡೀ ಮಂತ್ರಿ ಮಂಡಲ ಹೋಗಿದ್ದರೂ ಅವರು ಅಲ್ಲಿ ಗೆಲ್ಲಲು ಸಾಧ್ಯವಾಗಿಲ್ಲ. ಸ್ವಾಭಿಮಾನಿ ಜನತೆ ಕಾಂಗ್ರೆಸ್ಗೆ ಮತ ನೀಡಿದ್ದಾರೆ. ಮತದಾರರು ಬಿಜೆಪಿ ಮೇಲೆ ವಿಶ್ವಾಸ ಕಳೆದುಕೊಂಡಿರುವುದಕ್ಕೆ ಇದು ಸಾಕ್ಷಿ ಎಂದು ಶಿವಕುಮಾರ್ ಹೇಳಿದರು.