ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಜನ್ಮದಿನ ಆಚರಣೆ ಹಾಗೂ 'ಜನಧ್ವನಿ' ಕಾರ್ಯಕ್ರಮದಲ್ಲಿ ಗುರುವಾರ ಮಾತನಾಡಿದ ಅವರು, ‘ಕಾಂಗ್ರೆಸ್ ಪಕ್ಷವನ್ನು ಸಿಲುಕಿಸಲು ಪ್ರಯತ್ನ ನಡೆಯುತ್ತಿದೆ. ಅದು ಮುಂದುವರಿದರೆ ಬಿಜೆಪಿ ವಿರುದ್ಧ ಅಲ್ಲ, ಪೊಲೀಸರ ವಿರುದ್ಧ ಹೋರಾಟ ಆರಂಭಿಸುತ್ತೇವೆ. ಮಿಸ್ಟರ್ ಕಮಿಷನರ್, ಬಿ ಕೇರ್ ಫುಲ್’ ಎಂದು ಪೊಲೀಸ್ ಕಮಿಷನರ್ ವಿರುದ್ಧವೇ ಆಕ್ರೋಶ ಹೊರಹಾಕಿದರು.