ಇಲ್ಲಿಗೆ ಸಮೀಪದ ಬಸಾಪುರದ ಖಾಸಗಿ ವಿಮಾನ ನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಯಾರು ಬಲಿಷ್ಠವಾಗಿ ಇರುತ್ತಾರೊ ಅವರನ್ನು ಬಿಜೆಪಿ ಟಾರ್ಗೆಟ್ ಮಾಡುತ್ತದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಚಿದಂಬರಂ ಹಾಗೂ ನನ್ನಂಥವರನ್ನು ಗುರುತಿಸಿ ತನಿಖಾ ಸಂಸ್ಥೆಗಳ ಮೂಲಕ ದಾಳಿ ಮಾಡಿಸಲಾಗುತ್ತಿದೆ. ಕೊಡಬಾರದ ಕಿರುಕುಳ ಕೊಡುತ್ತಾರೆ. ನ್ಯಾಯಾಲಯದ ಬಗ್ಗೆ ನಮಗೆ ನಂಬಿಕೆ ಇದೆ. ನ್ಯಾಯ ಸಿಗಲಿದೆ ಎಂದರು.