ಬೆಂಗಳೂರು: ಬಿಜೆಪಿ ಸರ್ಕಾರ ಘೋಷಿಸಿರುವ ₹ 20 ಲಕ್ಷ ಕೋಟಿ ವಿಶೇಷ ಪ್ಯಾಕೇಜ್ ಯಾರಿಗೂ ತಲುಪಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಸಿಂದಗಿ, ಹಾನಗಲ್ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಕಿಡಿಕಾರಿರುವ ಶಿವಕುಮಾರ್,ಬಿಜೆಪಿ ಸರ್ಕಾರ ₹ 20 ಲಕ್ಷ ಕೋಟಿ ವಿಶೇಷ ಪ್ಯಾಕೇಜ್ನೀಡಿರುವುದಾಗಿ ಘೋಷಿಸಿದೆ. ಆದರೆ,ಜನರನ್ನು ಕೇಳಿದರೆಯಾರೊಬ್ಬರಿಗೂ ಪರಿಹಾರ ಬಂದಿಲ್ಲ ಎಂದು ಹೇಳುತ್ತಿದ್ದಾರೆ ಎಂದಿದ್ದಾರೆ.
ದೇಶದಲ್ಲಿ 100 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಣೆ ಮಾಡಲಾಗಿದೆಎಂದು ಬಿಜೆಪಿ ಸರ್ಕಾರ ಸಂಭ್ರಮಾಚರಣೆ ಮಾಡುತ್ತಿದೆ. ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡದೆ ಸಂಭ್ರಮಾಚರಣೆ ಮಾಡುತ್ತಿರುವುದು ಖಂಡನೀಯ. ಉದ್ಯೋಗ ಕಳೆದುಕೊಂಡಿರುವವರಿಗೆ, ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡಬೇಕು. ಅದುನಿಜವಾದ ಸಂಭ್ರಮ ಎಂದು ಅಭಿಪ್ರಾಯಪಟ್ಟಿದ್ದಾರೆ.
ಮುಂದುವರಿದು,ದೇಶದಲ್ಲಿ ಕೋವಿಡ್ ತೀವ್ರವಾಗಿದ್ದ ಸಮಯದಲ್ಲೇ ಬಿಜೆಪಿ ಸರ್ಕಾರ ವಿದೇಶಗಳಿಗೆ ಲಸಿಕೆ ಮಾರಿಕೊಂಡಿತು. ಖಾಸಗಿ ಆಸ್ಪತ್ರೆಗಳಿಗೂ ಲಸಿಕೆ ಮಾರಾಟಕ್ಕೆ ಅವಕಾಶ ನೀಡಿತು.ನಾವು ಉಚಿತ ಲಸಿಕೆ ನೀಡಲು ಮುಂದಾದಾಗ 'ಉಚಿತ ಲಸಿಕೆ'ಯ ಘೋಷಣೆ ಮಾಡಿತು.ಲಸಿಕೆ ವಿಚಾರದಲ್ಲಿ ಇಷ್ಟೆಲ್ಲಾ ಮಾಡಿದ ಮೇಲೂ ಈ ಸಂಭ್ರಮ ಏಕೆ? ಎಂದು ಪ್ರಶ್ನಿಸಿದ್ದಾರೆ.
ಬಿಜೆಪಿ ಸರ್ಕಾರ ₹20 ಲಕ್ಷ ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಿತು.
ಅದರೆ ಜನರನ್ನು ಕೇಳಿದಾಗ ಯಾರೊಬ್ಬರಿಗೂ ಪರಿಹಾರ ಬಂದಿಲ್ಲ ಎಂದು ಹೇಳುತ್ತಿದ್ದಾರೆ.
ರೈತರು, ಕಾರ್ಮಿಕರು, ಉದ್ಯೋಗ ಕಳೆದುಕೊಂಡವರು, ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡದ ಬಿಜೆಪಿ ಸರ್ಕಾರ ಈಗ ಸಂಭ್ರಮಾಚರಣೆ ಮಾಡುತ್ತಿದೆ. ಇದು ಖಂಡನೀಯ. - @DKShivakumarpic.twitter.com/GyojAuoy72