ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಶೀಘ್ರವೇ ಜೈಲಿಗೆ :ಬಿಜೆಪಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ ದೋಷಾರೋಪ ಪಟ್ಟಿ ಸಲ್ಲಿಸಿದ್ದು ಅವರು ಸದ್ಯವೇ ಜೈಲಿಗೆ ಹೋಗಲಿದ್ದಾರೆ ಎಂದು ಬಿಜೆಪಿ ಮುಖ್ಯ ವಕ್ತಾರ ಎಂ.ಜಿ.ಮಹೇಶ್ ಹೇಳಿದ್ದಾರೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಣ ದುರುಪಯೋಗ, ಅಕ್ರಮವಾಗಿ ಹಣ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 16– 17 ತಿಂಗಳಿಂದ ಜಾಮೀನಿನ ಮೇಲೆ ಇದ್ದರು. ಇನ್ನು ಯಾರೂ ರಕ್ಷಿಸಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.
ದೋಷಾರೋಪ ಪಟ್ಟಿಯಲ್ಲಿನ ಅಂಶಗಳನ್ನು ಗಮನಿಸಿದರೆ ನ್ಯಾಯಾಲಯ ಅವರಿಗೆ ದೊಡ್ಡ ಮಟ್ಟದ ಶಿಕ್ಷೆ ವಿಧಿಸುವುದು ಸ್ಪಷ್ಟ. ಸದಾ ನೈತಿಕತೆ ಬಗ್ಗೆ ಮಾತನಾಡುವ ಕಾಂಗ್ರೆಸ್ನವರು ಈ ದೋಷಾರೋಪದ ಆಧಾರದಲ್ಲಿ ಏನು ಉತ್ತರ ಕೊಡುತ್ತಾರೆ ಎಂದೂ ಅವರು ಪ್ರಶ್ನಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.