ಸುದ್ದಿಗಾರರ ಜತೆ ಶುಕ್ರವಾರ ಮಾತನಾಡಿದ ಅವರು, ‘ರಾಜಕೀಯ ಒತ್ತಡ ಇಲ್ಲದೇ ಯಾವುದೇ ಅಧಿಕಾರಿಗೂ ಏನನ್ನೂ ಮಾಡಲು ಸಾಧ್ಯವಿಲ್ಲ. ಫಲಾನುಭವಿಗಳು ಮೊದಲು ನೈತಿಕ ಹೊಣೆ ಹೊರಬೇಕು. ಫಲಾನುಭವಿಗಳು, ಸರ್ಕಾರದ ಅಧಿಕಾರ ದುರ್ಬಳಕೆ ಮಾಡಿಕೊಂಡಿರುವವರು ಮೊದಲು ರಾಜೀನಾಮೆ ನೀಡಬೇಕು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಸಮಸ್ಯೆಯನ್ನು ದೊಡ್ಡದು ಮಾಡಿಕೊಳ್ಳುವ ಮುನ್ನ ಫಲಾನುಭವಿಗಳನ್ನು ಸಂಪುಟದಿಂದ ಕೈಬಿಡಬೇಕು’ ಎಂದು ಆಗ್ರಹಿಸಿದರು.