ಸಿದ್ದರಾಮಯ್ಯ ಸ್ವತಃ ಎತ್ತಿನ ಬಂಡಿಯನ್ನು ಚಲಾಯಿಸುತ್ತಿದ್ದಾರೆ. ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್ಾರ್. ಪಾಟೀಲ, ಶಾಸಕ ಎಂ.ಬಿ. ಪಾಟೀಲ ಅವರು ಜತೆಗಿದ್ದಾರೆ. ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರಗಳ ವಿರುದ್ಧ ಘೋಷಣೆ ಕೂಗುತ್ತಿರುವ ಪಕ್ಷದ ಕಾರ್ಯಕರ್ತರು ಅವರೊಂದಿಗೆ ಹೆಜ್ಜೆ ಹಾಕುತ್ತಿದ್ದಾರೆ. ನಗರದ ವಿವಿಧ ಕಡೆಗಳಿಂದ ಕಾಂಗ್ರೆಸ್ ಶಾಸಕರು ಏಕಕಾಲಕ್ಕೆ ಎತ್ತಿನ ಬಂಡಿಗಳಲ್ಲಿ ವಿಧಾನಸೌಧದತ್ತ ಹೊರಟಿದ್ದು, ಕೆಲವೇ ಹೊತ್ತಿನಲ್ಲಿ ಹತ್ತಾರು ಎತ್ತಿನ ಬಂಡಿಗಳು ರಾಜ್ಯದ ಆಡಳಿತ ಕೇಂದ್ರ ತಲುಪಲಿವೆ.