ಕೋಲಾರ: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಮಲ್ಲಿಕಾರ್ಜುನ ಖರ್ಗೆ ಪರ ಪ್ರಚಾರ ನಡೆಸುವ ಉದ್ದೇಶದಿಂದ ವಿ.ಆರ್.ಸುದರ್ಶನ್ ಅವರು ಕೆಪಿಸಿಸಿ ಮುಖ್ಯ ವಕ್ತಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
‘ಪಕ್ಷದಕೇಂದ್ರೀಯ ಚುನಾವಣಾ ಸಮಿತಿ ಮುಖ್ಯಸ್ಥ ಮಧುಸೂದನ್ ಮಿಸ್ತ್ರಿ ನಿರ್ದೇಶಿಸಿರುವ ಪ್ರಕಾರ ಪ್ರಚಾರ ನಡೆಸುವವರು ಪಕ್ಷದಲ್ಲಿ ಯಾವುದೇ ಸ್ಥಾನ ಹೊಂದಿರಬಾರದು. ಹೀಗಾಗಿ, ಈ ನಿರ್ಧಾರ ಕೈಗೊಂಡಿದ್ದು, ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರಿಗೆ ಸಲ್ಲಿಸಿದ್ದೇನೆ’ ಎಂದು ಸುದರ್ಶನ್ ಅವರುಹೇಳಿದರು.