ಮೈಸೂರು: ‘ರಾಜ್ಯ ಸರ್ಕಾರ, ಬಿಪಿಎಲ್ ಪಡಿತರ ಚೀಟಿದಾರರಿಗೆ ಪ್ರತಿ ತಿಂಗಳು ನೀಡುತ್ತಿದ್ದ ಪಡಿತರದಲ್ಲಿ ಅಕ್ಕಿ ಕಡಿತಗೊಳಿಸಿರುವುದನ್ನು ಖಂಡಿಸಿ, ಮೇ 3ರಂದು ರಾಜ್ಯದೆಲ್ಲೆಡೆ ಕಾಂಗ್ರೆಸ್ನಿಂದ ಪತ್ರ ಚಳವಳಿ ನಡೆಸಲಾಗುವುದು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಶನಿವಾರ ಇಲ್ಲಿ ತಿಳಿಸಿದರು.