ಬಳಿಕ ಮಾತನಾಡಿದ ಆಂಜನೇಯ, ‘ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿ ನಮ್ಮದು ಪ್ರಬಲ ಸಮುದಾಯ. ಸುಮಾರು 60 ಲಕ್ಷ ಜನರಿದ್ದೇವೆ. ಹೀಗಾಗಿ ಕಾರ್ಯಾಧ್ಯಕ್ಷ ಸ್ಥಾನ ಕೇಳಿದ್ದೇವೆ. ಎಲ್ಲ ಸಮುದಾಯಗಳಿಗೂ ಅವಕಾಶ ಕೊಟ್ಟಿದ್ದೀರಿ. ನಮಗೂ ಕೊಡಿ. ನಮ್ಮ ಸಮುದಾಯ ಹಿಂದಿನಿಂದಲೂ ಕಾಂಗ್ರೆಸ್ ಬೆಂಬಲಕ್ಕೆ ನಿಂತಿದೆ ಎಂದು ಮನವರಿಕೆ ಮಾಡಿದ್ದೇವೆ’ ಎಂದರು.