‘ಹಲವು ತಿಂಗಳಿನಿಂದ ಸಂಚು ರೂಪಿಸಿ ಆರೋಪಿಗಳು ಕೃತ್ಯ ಎಸಗಿದ್ದಾರೆ. ವಾಣಿಜ್ಯ ತೆರಿಗೆ ಇಲಾಖೆ ಇನ್ಸ್ಪೆಕ್ಟರ್ ಚಂದ್ರು ಹಾಗೂ ಇತರರೂ ಜಾಲದಲ್ಲಿದ್ದಾರೆ. ಸರ್ಕಾರದ ದಾಖಲೆಗಳನ್ನೇ ಕದ್ದು, ಲಕ್ಷಾಂತರ ಅಭ್ಯರ್ಥಿಗಳಿಗೆ ಅನ್ಯಾಯ ಮಾಡಿದ್ದಾರೆ. ಇವರ ಕೃತ್ಯದಿಂದ ಪರೀಕ್ಷೆಗಳನ್ನೂ ಮುಂದೂಡಲಾಗಿದೆ. ಆರೋಪಿಗಳ ಜಾಲದಲ್ಲಿ ಮತ್ತಷ್ಟು ಮಂದಿ ಇರುವ ಶಂಕೆ ಇದೆ. ಅವರ ಪತ್ತೆಗೆ ತನಿಖೆ ಮುಂದುವರಿದಿದ್ದು, ಇಬ್ಬರೂ ನೌಕರರನ್ನು ಕಸ್ಟಡಿಗೆ ನೀಡಬೇಕು’ ಎಂದು ಸಿಸಿಬಿ ಪೊಲೀಸರು ನ್ಯಾಯಾಲಯವನ್ನು ಕೋರಿದ್ದರು.