ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಶ್ನೆಪತ್ರಿಕೆ ಸೋರಿಕೆ: ಕೆಪಿಎಸ್‌ಸಿ ನೌಕರರು ಸಿಸಿಬಿ ಕಸ್ಟಡಿಗೆ

Last Updated 26 ಜನವರಿ 2021, 18:24 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಥಮ ದರ್ಜೆ ಸಹಾ ಯಕರ (ಎಫ್‌ಡಿಎ) ನೇಮಕಾತಿ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಪ್ರಮುಖ ಆರೋಪಿಗಳು ಎನ್ನಲಾದ ಕರ್ನಾ ಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಇಬ್ಬರು ನೌಕರರನ್ನು ಹೆಚ್ಚಿನ ವಿಚಾರಣೆಗಾಗಿ ಸಿಸಿಬಿ ಕಸ್ಟಡಿಗೆ ಒಪ್ಪಿಸಲಾಗಿದೆ.

ಪ್ರಶ್ನೆಪತ್ರಿಕೆಗಳನ್ನು ಕದ್ದು ಲಕ್ಷಾಂತರ ರೂಪಾಯಿಗೆ ಮಾರಾಟ ಮಾಡಿದ್ದರು ಎನ್ನಲಾದ ಕೆಪಿಎಸ್‌ಸಿ ಪರೀಕ್ಷಾ ನಿಯಂತ್ರಕರ ವಿಭಾಗದ ಶೀಘ್ರ ಲಿಪಿಗಾರ್ತಿ ಸನಾ ಬೇಡಿ ಹಾಗೂ ದ್ವಿತೀಯ ದರ್ಜೆ ಸಹಾಯಕ (ಎಸ್‌ಡಿಎ) ರಮೇಶ್ ಅಲಿಯಾಸ್ ರಾಮಪ್ಪ ಹೆರಕಲ್ ಎಂಬಾತನನ್ನು ಸಿಸಿಬಿ ಪೊಲೀಸರು ಸೋಮವಾರವೇ ಬಂಧಿಸಿದ್ದರು. ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿ ಹೇಳಿಕೆ ಪಡೆದಿದ್ದ ಪೊಲೀಸರು, ಅವರಿಬ್ಬರನ್ನು ಸ್ಥಳೀಯ ನ್ಯಾಯಾಲಯಕ್ಕೆ ಮಂಗಳವಾರ ಹಾಜರುಪಡಿಸಿದರು.

‘ಹಲವು ತಿಂಗಳಿನಿಂದ ಸಂಚು ರೂಪಿಸಿ ಆರೋಪಿಗಳು ಕೃತ್ಯ ಎಸಗಿದ್ದಾರೆ. ವಾಣಿಜ್ಯ ತೆರಿಗೆ ಇಲಾಖೆ ಇನ್‌ಸ್ಪೆಕ್ಟರ್ ಚಂದ್ರು ಹಾಗೂ ಇತರರೂ ಜಾಲದಲ್ಲಿದ್ದಾರೆ. ಸರ್ಕಾರದ ದಾಖಲೆಗಳನ್ನೇ ಕದ್ದು, ಲಕ್ಷಾಂತರ ಅಭ್ಯರ್ಥಿಗಳಿಗೆ ಅನ್ಯಾಯ ಮಾಡಿದ್ದಾರೆ. ಇವರ ಕೃತ್ಯದಿಂದ ಪರೀಕ್ಷೆಗಳನ್ನೂ ಮುಂದೂಡಲಾಗಿದೆ. ಆರೋಪಿಗಳ ಜಾಲದಲ್ಲಿ ಮತ್ತಷ್ಟು ಮಂದಿ ಇರುವ ಶಂಕೆ ಇದೆ. ಅವರ ಪತ್ತೆಗೆ ತನಿಖೆ ಮುಂದುವರಿದಿದ್ದು, ಇಬ್ಬರೂ ನೌಕರರನ್ನು ಕಸ್ಟಡಿಗೆ ನೀಡಬೇಕು’ ಎಂದು ಸಿಸಿಬಿ ಪೊಲೀಸರು ನ್ಯಾಯಾಲಯವನ್ನು ಕೋರಿದ್ದರು.

ಮನವಿ ಪುರಸ್ಕರಿಸಿದ ನ್ಯಾಯಾಲಯ, ಆರೋಪಿಗಳನ್ನು ಫೆ. 2ರವರೆಗೂ ಸಿಸಿಬಿ ಕಸ್ಟಡಿಗೆ ನೀಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT