<p><strong>ಬೆಂಗಳೂರು:</strong> 2015ರ ಬ್ಯಾಚ್ನ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ನಡೆದ ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆಯದೃಢೀಕೃತ ಪ್ರತಿ ನೀಡದ ಕರ್ನಾಟಕ ಲೋಕಸೇವಾ ಆಯೋಗದ(ಕೆಪಿಎಸ್ಸಿ) ಮಾಹಿತಿ ಅಧಿಕಾರಿಗೆ ₹25 ಸಾವಿರ ದಂಡ ವಿಧಿಸಿರುವ ಕರ್ನಾಟಕ ಮಾಹಿತಿ ಆಯೋಗ, ಅರ್ಜಿದಾರರಿಗೆ ₹1 ಲಕ್ಷ ಪರಿಹಾರ ನೀಡಲು ಆದೇಶಿಸಿದೆ.</p>.<p>ಕೆಪಿಎಸ್ಸಿ ಪರೀಕ್ಷೆ ಬರೆದಿದ್ದಬಿ.ಕೆ.ಸುಧನ್ವ ಬಂಡೋಲ್ಕರ್ ಎಂಬವರು2020ರ ಜನವರಿ 14ರಂದು ಅರ್ಜಿ ಸಲ್ಲಿಸಿ ಮೌಲ್ಯಮಾಪನ ಮಾಡಿರುವ ಉತ್ತರ ಪತ್ರಿಕೆಗಳ ದೃಢೀಕೃತ ಪ್ರತಿಗಳನ್ನು ಕೋರಿ ಅರ್ಜಿ ಸಲ್ಲಿಸಿದ್ದರು. ಉತ್ತರ ಪತ್ರಿಕೆ ನೀಡಲು ಕೆಪಿಎಸ್ಸಿ ನಿರಾಕರಿಸಿದ ಕಾರಣ ಅವರು ಮಾಹಿತಿ ಆಯೋಗಕ್ಕೆ ಮೇಲ್ಮನವಿ ಸಲ್ಲಿಸಿದ್ದರು.</p>.<p>ವಿಚಾರಣೆ ನಡೆಸಿದ ರಾಜ್ಯ ಮಾಹಿತಿ ಆಯುಕ್ತ ಕೆ.ಪಿ. ಮಂಜುನಾಥ್, ಕೆಪಿಎಸ್ಸಿ ಮಾಹಿತಿ ಅಧಿಕಾರಿ ಶಶಿಕಲಾ ಅವರಿಗೆ ವಿವರಣೆ ಕೇಳಿ ನೋಟಿಸ್ ನೀಡಿದ್ದರು. ಮಾಹಿತಿ ನೀಡದಿರುವ ಕಾರಣಕ್ಕೆ ₹25 ಸಾವಿರ ದಂಡ ವಿಧಿಸಬಾರದೇಕೆ ಎಂದು ಎಚ್ಚರಿಸಿದ್ದರು.</p>.<p>ನಂತರ ವಿಚಾರಣೆಗೂ ಹಾಜರಾಗದೆ ನೋಟಿಸ್ಗೆ ವಿವರಣೆಯನ್ನೂ ಸಲ್ಲಿಸದ ಶಶಿಕಲಾ ಅವರಿಗೆ<br />₹ 25 ಸಾವಿರ ದಂಡ ವಿಧಿಸಲಾಗಿದೆ. ಈ ಮೊತ್ತವನ್ನು ಅವರ ವೇತನದಲ್ಲಿ ತಿಂಗಳಿಗೆ ₹5 ಸಾವಿರದಂತೆ 5 ತಿಂಗಳು ಕಡಿತ ಮಾಡಿಕೊಳ್ಳುವಂತೆ ಕೆಪಿಎಸ್ಸಿ ಕಾರ್ಯದರ್ಶಿಗೆ ಕೆ.ಪಿ.ಮಂಜುನಾಥ್ ಆದೇಶ ನೀಡಿದ್ದಾರೆ.</p>.<p>‘ಉತ್ತರ ಪತ್ರಿಕೆ ನೀಡದ ಕಾರಣ ಅರ್ಜಿದಾರರಿಗೆ ಆಗಿರುವ ನಷ್ಟಕ್ಕೆ ₹1 ಲಕ್ಷ ಪರಿಹಾರವನ್ನು ಕೆಪಿಎಸ್ಸಿ ಪಾವತಿಸಬೇಕು.ವೇತನ ಕಡಿತ ಮತ್ತು ಪರಿಹಾರ ಪಾವತಿ ಮಾಡಿರುವ ಬಗ್ಗೆ ಮುಂದಿನ ವಿಚಾರಣೆ ವೇಳೆ ಮಾಹಿತಿ ಒದಗಿಸಬೇಕು’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> 2015ರ ಬ್ಯಾಚ್ನ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ನಡೆದ ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆಯದೃಢೀಕೃತ ಪ್ರತಿ ನೀಡದ ಕರ್ನಾಟಕ ಲೋಕಸೇವಾ ಆಯೋಗದ(ಕೆಪಿಎಸ್ಸಿ) ಮಾಹಿತಿ ಅಧಿಕಾರಿಗೆ ₹25 ಸಾವಿರ ದಂಡ ವಿಧಿಸಿರುವ ಕರ್ನಾಟಕ ಮಾಹಿತಿ ಆಯೋಗ, ಅರ್ಜಿದಾರರಿಗೆ ₹1 ಲಕ್ಷ ಪರಿಹಾರ ನೀಡಲು ಆದೇಶಿಸಿದೆ.</p>.<p>ಕೆಪಿಎಸ್ಸಿ ಪರೀಕ್ಷೆ ಬರೆದಿದ್ದಬಿ.ಕೆ.ಸುಧನ್ವ ಬಂಡೋಲ್ಕರ್ ಎಂಬವರು2020ರ ಜನವರಿ 14ರಂದು ಅರ್ಜಿ ಸಲ್ಲಿಸಿ ಮೌಲ್ಯಮಾಪನ ಮಾಡಿರುವ ಉತ್ತರ ಪತ್ರಿಕೆಗಳ ದೃಢೀಕೃತ ಪ್ರತಿಗಳನ್ನು ಕೋರಿ ಅರ್ಜಿ ಸಲ್ಲಿಸಿದ್ದರು. ಉತ್ತರ ಪತ್ರಿಕೆ ನೀಡಲು ಕೆಪಿಎಸ್ಸಿ ನಿರಾಕರಿಸಿದ ಕಾರಣ ಅವರು ಮಾಹಿತಿ ಆಯೋಗಕ್ಕೆ ಮೇಲ್ಮನವಿ ಸಲ್ಲಿಸಿದ್ದರು.</p>.<p>ವಿಚಾರಣೆ ನಡೆಸಿದ ರಾಜ್ಯ ಮಾಹಿತಿ ಆಯುಕ್ತ ಕೆ.ಪಿ. ಮಂಜುನಾಥ್, ಕೆಪಿಎಸ್ಸಿ ಮಾಹಿತಿ ಅಧಿಕಾರಿ ಶಶಿಕಲಾ ಅವರಿಗೆ ವಿವರಣೆ ಕೇಳಿ ನೋಟಿಸ್ ನೀಡಿದ್ದರು. ಮಾಹಿತಿ ನೀಡದಿರುವ ಕಾರಣಕ್ಕೆ ₹25 ಸಾವಿರ ದಂಡ ವಿಧಿಸಬಾರದೇಕೆ ಎಂದು ಎಚ್ಚರಿಸಿದ್ದರು.</p>.<p>ನಂತರ ವಿಚಾರಣೆಗೂ ಹಾಜರಾಗದೆ ನೋಟಿಸ್ಗೆ ವಿವರಣೆಯನ್ನೂ ಸಲ್ಲಿಸದ ಶಶಿಕಲಾ ಅವರಿಗೆ<br />₹ 25 ಸಾವಿರ ದಂಡ ವಿಧಿಸಲಾಗಿದೆ. ಈ ಮೊತ್ತವನ್ನು ಅವರ ವೇತನದಲ್ಲಿ ತಿಂಗಳಿಗೆ ₹5 ಸಾವಿರದಂತೆ 5 ತಿಂಗಳು ಕಡಿತ ಮಾಡಿಕೊಳ್ಳುವಂತೆ ಕೆಪಿಎಸ್ಸಿ ಕಾರ್ಯದರ್ಶಿಗೆ ಕೆ.ಪಿ.ಮಂಜುನಾಥ್ ಆದೇಶ ನೀಡಿದ್ದಾರೆ.</p>.<p>‘ಉತ್ತರ ಪತ್ರಿಕೆ ನೀಡದ ಕಾರಣ ಅರ್ಜಿದಾರರಿಗೆ ಆಗಿರುವ ನಷ್ಟಕ್ಕೆ ₹1 ಲಕ್ಷ ಪರಿಹಾರವನ್ನು ಕೆಪಿಎಸ್ಸಿ ಪಾವತಿಸಬೇಕು.ವೇತನ ಕಡಿತ ಮತ್ತು ಪರಿಹಾರ ಪಾವತಿ ಮಾಡಿರುವ ಬಗ್ಗೆ ಮುಂದಿನ ವಿಚಾರಣೆ ವೇಳೆ ಮಾಹಿತಿ ಒದಗಿಸಬೇಕು’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>