ಬೆಂಗಳೂರು: ’ಬಿಬಿಎಂಪಿ ವ್ಯಾಪ್ತಿಯಲ್ಲಿ 2015–16ರಿಂದ 2021–22ರ ನಡುವೆ ವಿವಿಧ ಕಾಮಗಾರಿಗಳನ್ನು ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮ (ಕೆಆರ್ಐಡಿಎಲ್) ಮೂಲಕ ನಿರ್ವಹಿಸಲಾಗಿದ್ದು, ₹12,944 ಕೋಟಿ ಅನುದಾನವನ್ನೂ ನಿಗಮಕ್ಕೆ ಬಿಡುಗಡೆ ಮಾಡಲಾಗಿದೆ. ಇವುಗಳಲ್ಲಿ ಶೇ 50ಕ್ಕೂ ಹೆಚ್ಚು ಕಾಮಗಾರಿಗಳು ನಡೆದೇ ಇಲ್ಲ. ಆದರೂ ಹಣ ಪಾವತಿಸಲಾಗಿದೆ’ ಎಂದು ಬಿಜೆಪಿಯ ಬೆಂಗಳೂರು ದಕ್ಷಿಣ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಆರ್.ರಮೇಶ್ ಆರೋಪಿಸಿದ್ದಾರೆ.